ಫಾರೂಕ್ ಅಬ್ದುಲ್ಲಾ 
ದೇಶ

ಜಮ್ಮು-ಕಾಶ್ಮೀರಕ್ಕೆ ಹೊಸ ನಿವಾಸತ್ವ ಕಾನೂನು ಅಸಂವಿಧಾನಿಕ ಮತ್ತು ಅಕ್ರಮ: ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದ ಹೊಸ ನಿವಾಸತ್ವ ಕಾನೂನು ಅಕ್ರಮ ಮತ್ತು ಅಸಂವಿಧಾನಿಕ, ಇದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಲೋಕಸಭಾ ಸದಸ್ಯ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೊಸ ನಿವಾಸತ್ವ ಕಾನೂನು ಅಕ್ರಮ ಮತ್ತು ಅಸಂವಿಧಾನಿಕ, ಇದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಲೋಕಸಭಾ ಸದಸ್ಯ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಅಂಸವಿಧಾನಿಕ ಮತ್ತು ಅಕ್ರಮವಾಗಿರುವುದರ ವಿರುದ್ಧ ಯಾವುದೇ ಕ್ರಮ ಕೈಗೊಂಡರೂ ಅದನ್ನು ನಾವು ಜಮ್ಮು-ಕಾಶ್ಮೀರದ ಜನತೆ ಒಪ್ಪಲು ಸಾಧ್ಯವಿಲ್ಲ, ಒಟ್ಟಾಗಿ ನಿಂತು ಹೋರಾಡುತ್ತೇವೆ, ಸದ್ಯ ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಸರಿಯಾಗಿಲ್ಲ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ತೆಗೆದು ಹಾಕಿ ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ ನಂತರ ತರಲಾಗಿರುವ ಹೊಸ ವಾಸ ಕಾನೂನಿನ ಪ್ರಕಾರ 15 ವರ್ಷಗಳ ಕಾಲ ಜಮ್ಮು-ಕಾಶ್ಮೀರದಿಂದ ನೆಲೆಸಿರುವ ಶಾಶ್ವತರಹಿತ ನಿವಾಸಿಗಳು ಅಲ್ಲಿನ ವಾಸಿಗಳು ಎಂಬ ಪ್ರಮಾಣಪತ್ರ ಪಡೆಯಲು, ಸರ್ಕಾರದ ಇತರ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಸಂವಿಧಾನ ಪರಿಚ್ಛೇದ 370 ಮತ್ತು 35ಎ ಅಧಿಸೂಚನೆಯನ್ನು ರದ್ದುಗೊಳಿಸುವ ಮೊದಲು ಜಮ್ಮು-ಕಾಶ್ಮೀರದಲ್ಲಿ ಅಲ್ಲಿಯೇ ಹುಟ್ಟಿ ಬೆಳೆದ ಪ್ರಜೆಗಳು ಮಾತ್ರ ಭೂಮಿ ಖರೀದಿಸಬಹುದಾಗಿತ್ತು ಮತ್ತು ಸರ್ಕಾರಿ ನೌಕರಿ ಗಟ್ಟಿಸಿಕೊಳ್ಳಬಹುದಾಗಿತ್ತು. 

ಫಾರೂಕ್ ಅಬ್ದುಲ್ಲಾ ಇದರ ಜೊತೆಗೆ ಭಾರತ ಮತ್ತು ಚೀನಾ, ಭಾರತ ಮತ್ತು ಪಾಕಿಸ್ತಾನ ಮಧ್ಯೆ ಮಾತುಕತೆಗೆ ಸಹ ಒಲವು ತೋರಿಸಿದರು. ಭಾರತ-ಚೀನಾ ಮತ್ತು ಭಾರತ-ಪಾಕಿಸ್ತಾನ ಮಧ್ಯೆ ಮಾತುಕತೆಯೊಂದೇ ಪರಿಹಾರ, ಯುದ್ಧ ಅಲ್ಲ ಎಂದು ಅಭಿಪ್ರಾಯಪಟ್ಟರು.

ಶ್ರೀನಗರ ಕ್ಷೇತ್ರದ ಸಂಸದರಾಗಿರುವ ಫಾರೂಕ್ ಅಬ್ದುಲ್ಲಾ, ಕಳೆದ ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರ ಸಂವಿಧಾನ ಪರಿಚ್ಛೇದ 370 ರದ್ದುಗೊಳಿಸಿದ ನಂತರ ಅವರನ್ನು 8 ತಿಂಗಳ ಕಾಲ ಗೃಹ ಬಂಧನದಲ್ಲಿರಿಸಲಾಗಿತ್ತು, ಇತ್ತೀಚೆಗಷ್ಟೆ ಬಿಡುಗಡೆಗೊಂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT