ಕೊವಾಕ್ಸಿನ್ ಔಷಧ 
ದೇಶ

ಕೋವಿಡ್-19: ದೇಶದ ಮೊದಲ ಲಸಿಕೆ 'ಕೊವಾಕ್ಸಿನ್' ಮಾನವ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ

ಕೋವಿಡ್-19 ವಿರುದ್ಧದ ದೇಶದ ಮೊದಲ ಲಸಿಕೆ 'ಕೊವಾಕ್ಸಿನ್ 'ನ ಮೊದಲ ಹಾಗೂ ಎರಡನೇ ಹಂತದ ಮಾನವ ಪ್ರಯೋಗ ಕಾರ್ಯಕ್ಕೆ  ಹೈದರಾಬಾದ್ ಮೂಲದ ಲಸಿಕೆ ತಯಾರಿಕ ಕಂಪನಿ ಭಾರತ್ ಬಯೋಟೆಕ್ ಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ( ಡಿಸಿಜಿಐ) ಅನುಮೋದನೆ ನೀಡಿದೆ.

ಹೈದರಾಬಾದ್:  ಕೋವಿಡ್-19 ವಿರುದ್ಧದ ದೇಶದ ಮೊದಲ ಲಸಿಕೆ 'ಕೊವಾಕ್ಸಿನ್ 'ನ ಮೊದಲ ಹಾಗೂ ಎರಡನೇ ಹಂತದ ಮಾನವ ಪ್ರಯೋಗ ಕಾರ್ಯಕ್ಕೆ  ಹೈದರಾಬಾದ್ ಮೂಲದ ಲಸಿಕೆ ತಯಾರಿಕ ಕಂಪನಿ ಭಾರತ್ ಬಯೋಟೆಕ್ ಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ( ಡಿಸಿಜಿಐ) ಅನುಮೋದನೆ ನೀಡಿದೆ.

ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಲಸಿಕೆಗೆ ಕೊವಾಕ್ಸಿನ್ ಎಂದು ಹೆಸರಿಸಲಾಗಿದೆ ಮತ್ತು ಇದು ನಿಷ್ಕ್ರಿಯ ಲಸಿಕೆ. ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ  ಸಾರ್ಸ್-ಕೋವ್-2 ನ ಒತ್ತಡವನ್ನು ಪ್ರತ್ಯೇಕಿಸಿ ವರ್ಗಾವಣೆ ಮಾಡಿದ ನಂತರ ಇದನ್ನು ಅಭಿವೃದ್ಧಿಪಡಿಸಿ ಕಂಪನಿಗೆ ವರ್ಗಾಯಿಸಿದೆ.

ಪೂರ್ವಭಾವಿ ಅಧ್ಯಯನ (ಪ್ರೀ ಕ್ಲಿನಿಕಲ್ ಸ್ಟಡೀಸ್) ಸುರಕ್ಷತೆ ಮತ್ತು ರೋಗ ನಿರೋಧಕ ಶಕ್ತಿ ಪ್ರತಿಕ್ರಿಯೆಯ ಫಲಿತಾಂಶಗಳನ್ನು ಕಂಪನಿ ಸಲ್ಲಿಸಿದ ನಂತರ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐನಿಂದ ಅನುಮತಿ ಸಿಕ್ಕಿದೆ. ಜುಲೈ ತಿಂಗಳಲ್ಲಿ ದೇಶಾದ್ಯಂತ ಈ ಲಸಿಕೆಯ ಮಾನವ ಪ್ರಯೋಗ ಆರಂಭವಾಗಲಿದೆ.

ಕೋವಿಡ್-19 ವಿರುದ್ಧದ ಮೊದಲ ಸ್ವದೇಶಿ ಲಸಿಕೆ ಕೊವಾಕ್ಸಿನ್ ನನ್ನು ಹೆಮ್ಮೆಯಿಂದ ಘೋಷಿಸುತ್ತಿದ್ದೇವೆ. ಐಸಿಎಂಆರ್ ಮತ್ತು ಎನ್ ಐವಿ ಸಹಭಾಗಿತ್ವದಲ್ಲಿ ಈ ಔಷಧವನ್ನು ಕಂಡುಹಿಡಿಯಲಾಗಿದೆ ಎಂದು ಭಾರತ್ ಬಯೋಟೆಕ್ ಕಂಪನಿ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣಾ ಎಲ್ಲಾ ಹೇಳಿದ್ದಾರೆ.

ಪ್ರಗತಿಯಲ್ಲಿರುವ ಸಂಶೋಧನೆ ಮತ್ತು ಪರಿಣಿತರ ಮುನ್ಸೂಚನೆಯಂತೆ ಹೆಚ್ 1ಎನ್1 ಸಾಂಕ್ರಾಮಿಕ ರೋಗಕ್ಕೂ ಯಶಸ್ವಿಯಾಗಿ ಲಸಿಕೆಯೊಂದನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗುವುದಾಗಿ ಭಾರತ್ ಬಯೋಟೆಕ್ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಸುಚಿತ್ರಾ ಎಲ್ಲ ತಿಳಿಸಿದ್ದಾರೆ.

ಈ ಕಂಪನಿ ಇಲ್ಲಿಯವರೆಗೂ ಪೋಲಿಯೋ, ರೇಬಿಸ್, ರೊಟಾ ವೈರಸ್, ಚಿಕಾನ್ ಗುನ್ಯಾ,ಜಪಾನೀಸ್ ಎನ್ಸೆಫಾಲಿಟಿಸ್ ಮತ್ತು ಜಿಂಕಾ ವಿರುದ್ಧದ ಕಾಯಿಲೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!