ಮಗುವನ್ನು ಎದೆಗಪ್ಪಿಕೊಂಡು ರೋಧಿಸುತ್ತಿರುವ ತಂದೆ 
ದೇಶ

ವೈದ್ಯರ ನಿರ್ಲಕ್ಷ್ಯ: ಚಿಕಿತ್ಸೆ ಸಿಗದೆ ಬಲಿಯಾದ ಮಗು, ಎದೆಗಪ್ಪಿಕೊಂಡು ರೋಧಿಸಿದ ಪೋಷಕರು!

ಕುತ್ತಿಗೆ ಊತ ಹಾಗೂ ಅತೀವ್ರ ಜ್ವರದಿಂದ ಬಳಲುತ್ತಿದ್ದ ಒಂದು ವರ್ಷದ ಮಗು ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದು, ಕಣ್ಣೆದುರು ಆಡವಾಡಿಕೊಂಡು ಬೆಳೆಯಬೇಕಿದ್ದ ಮುದ್ದು ಮಗುವಿನ ಶವ ಕಂಡ ಪೋಷಕರು ಬಿಗಿದಪ್ಪಿಕೊಂಡು ರೋಧಿಸಿದ ಮನಕಲಕುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. 

ಕನೌಜ್: ಕುತ್ತಿಗೆ ಊತ ಹಾಗೂ ಅತೀವ್ರ ಜ್ವರದಿಂದ ಬಳಲುತ್ತಿದ್ದ ಒಂದು ವರ್ಷದ ಮಗು ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದು, ಕಣ್ಣೆದುರು ಆಡವಾಡಿಕೊಂಡು ಬೆಳೆಯಬೇಕಿದ್ದ ಮುದ್ದು ಮಗುವಿನ ಶವ ಕಂಡ ಪೋಷಕರು ಬಿಗಿದಪ್ಪಿಕೊಂಡು ರೋಧಿಸಿದ ಮನಕಲಕುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. 

ಸಾವನ್ನಪ್ಪಿದ ಮಗುವನ್ನು ಪೋಷಕರು ಕಂಕುಳಲ್ಲೇ ಎತ್ತಿಕೊಂಡು ಯಾತನೆ ಪಡುತ್ತಿರುವ ದಂಪತಿಯ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ವೈದ್ಯರ ನಿರ್ಲಕ್ಷಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ವಿಡಿಯೋ ಕಂಡ ಜನರು ಮಗು ಕಳೆದುಕೊಂಡ ಪೋಷಕರ ಕರುಣಾಜನಕ ಸ್ಥಿತಿಗೆ ವ್ಯಥೆಪಟ್ಟಿದ್ದಾರೆ. 

ಕನೌಜ್ ಜಿಲ್ಲೆಯ ಮಿಶ್ರಿಪುರ್ ಗ್ರಾಮದ ಪ್ರೇಮ್ ಚಂದ್ ಎಂಬ ವ್ಯಕ್ತಿಯ 1 ವರ್ಷದ ಗಂಡು ಮಗು ಅತೀವ್ರ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ. 

ಆಸ್ಪತ್ರೆಗೆ ಕರೆತಂದು 45 ನಿಮಿಷವಾದರೂ, ಯಾವೊಬ್ಬ ವೈದ್ಯರೂ ಕೂಡ ಮಗುವನ್ನು ಪರಿಶೀಲಿಸಲಿಲ್ಲ ಬಳಿಕ ಬಂದ ವೈದ್ಯರೊಬ್ಬರು ಕಾನ್ಪುರಕ್ಕೆ ಕರೆದೊಯ್ಯುವಂತೆ ತಿಳಿಸಿದರು. ನನ್ನ ಬಳಿ ಹಣವಿರಲಿಲ್ಲ. ನಾನೇನು ಮಾಡಬೇಕಿತ್ತು..? ಎಂದು ಪ್ರೇಮ್ ಚಂದ್ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗುತ್ತಿದೆ. 

ಈ ನಡುವೆ ಪೋಷಕರ ಈ ಆರೋಪವನ್ನು ಕನೌಜ್ ವೈದ್ಯಕೀಯ ಕಚೇರಿಯ ಮುಖ್ಯಸ್ಥ ಡಾ.ಕೃಷ್ಣ ಸ್ವರೂಪ್ ಅವರು ನಿರಾಕರಿಸಿದ್ದಾರೆ. 

ಮಿಶ್ರಿಪುರ್ ಗ್ರಾಮದ ನಿವಾಸಿ ಪ್ರೇಮ್ ಚಂದ್ ಎಂಬ ವ್ಯಕ್ತಿ ತನ್ನ ಪುತ್ರ ಅನುಜ್ ಎಂಬ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೂಡಲೇ ತಜ್ಞ ವೈದ್ಯರು ತಪಾಸಣೆ ನಡೆಸಿದ್ದಾರೆ. ಆದರೆ, ಮಗು ಅರ್ಧಗಂಟೆಯಲ್ಲಿ ಸಾವನ್ನಪ್ಪಿದೆ. ಆಸ್ಪತ್ರೆ ಮಗುವನ್ನು ದಾಖಲಿಸಿಕೊಳ್ಳಲಿಲ್ಲ, ವೈದ್ಯರು ಚಿಕಿತ್ಸೆ ನೀಡಲಿಲ್ಲ ಎಂಬ ಆರೋಪ ಸರಿಯಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT