ಬಾಬಾ ರಾಮ್ ದೇವ್ 
ದೇಶ

ಕೊರೊನಿಲ್ ಕೋವಿಡ್ ಗುಣಪಡಿಸಲಿದೆ ಎಂದು ನಾವೆಂದೂ ಹೇಳಿಲ್ಲ:ಯುಟರ್ನ್ ಹೊಡೆದ ಪತಂಜಲಿ ಸಂಸ್ಥೆ

ಹರಿದ್ವಾರ ಮೂಲದ ಪತಂಜಲಿ ಸಂಸ್ಥೆ ತಾನು ಕೊರೋನಾವೈರಸ್ ಸೋಂಕಿಗೆ ಔಷಧಿ ತಯಾರಿಸಿದ್ದಾಗಿ ಎಲ್ಲಿಯೂ ಹೇಳಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.  ಆಯುಷ್ ಸಚಿವಾಲಯ ನೀಡಿದ ನೋಟಿಸ್‌ಗೆ ಉತ್ತರವಾಗಿ ಪತಂಜಲಿ ಸಂಸ್ಥೆ ಈ ಹೇಳಿಕೆ ನೀಡಿದೆ.

ನವದೆಹಲಿ: ಹರಿದ್ವಾರ ಮೂಲದ ಪತಂಜಲಿ ಸಂಸ್ಥೆ ತಾನು ಕೊರೋನಾವೈರಸ್ ಸೋಂಕಿಗೆ ಔಷಧಿ ತಯಾರಿಸಿದ್ದಾಗಿ ಎಲ್ಲಿಯೂ ಹೇಳಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.  ಆಯುಷ್ ಸಚಿವಾಲಯ ನೀಡಿದ ನೋಟಿಸ್‌ಗೆ ಉತ್ತರವಾಗಿ ಪತಂಜಲಿ ಸಂಸ್ಥೆ ಈ ಹೇಳಿಕೆ ನೀಡಿದೆ.

"ಪತಂಜಲಿ ಕರೋನಾ ಔಷಧಿ ತಯಾರಿಸುವುದಾಗಿ ಎಂದಿಗೂ ಹೇಳಿಕೊಂಡಿಲ್ಲ. ಬದಲಿಗೆ, ಕರೋನಾ ರೋಗಿಗಳನ್ನು ಈ ಔಷಧಿಯಿಂದ ಗುಣಪಡಿಸಲಾಗಿದೆ.ಆಯುಷ್ ಸಚಿವಾಲಯ ನೀಡಿದ ಪರವಾನಗಿ ಅಡಿಯಲ್ಲಿ ಇದನ್ನು ತಯಾರಿಸಲಾಗಿದೆ" ಎಂದು ಪತಂಜಲಿ ಆಯುರ್ವೇದ ಸಿಇಒ ಆಚಾರ್ಯ ಬಾಲಕೃಷ್ಣ ಅವರು ನೋಟಿಸ್‌ಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ.

"ನಾವು ತುಳಸಿ ಗಿಲೋಯ್ ಅಶ್ವಗಂಧರ ಸಂಯೋಜನೆ ಹೊಂದಿದ ಸುಧಾರಿತ ಔಷಧಿ ತಯಾರಿಸಿದ್ದೇವೆ. ಮತ್ತು ಈ ಔಷಧಿ ಕೋವಿಡ್ ರೋಗಿಗಳ ಮೇಲೆ ಕ್ಲಿನಿಕಲ್ ಪ್ರಯೋಗ ಮಾಡಲಾಗಿ ಅವರು ಗುಣಹೊಂದಿದ್ದಾರೆ.  ನಮ್ಮ ವಿರುದ್ಧ ಪಿತೂರಿ ನಡೆಸಲಾಗಿದೆ ಮತ್ತು ಆಯುಷ್ ಸಚಿವಾಲಯವು ಬಯಸಿದರೆ ನಾವು ಇನ್ನೊಮ್ಮೆ ಈ ಪ್ರಯೋಗ ಕೈಗೊಳ್ಳಲು ಸಿದ್ದವಿದ್ದೇವೆ."

ಇತ್ತೀಚೆಗೆ , ಪತಂಜಲಿ ಆಯುರ್ವೇದ, ನಿಮ್ಸ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ,ಕೊರೋನಾ ರೋಗಿಗಳನ್ನು ಗುಣಪಡಿಸುವುದಾಗಿ ಹೇಳಲಾಗಿದ್ದ  ಕೊರೊನಿಲ್ ಮತ್ತು ಶ್ವಾಸರಿ ವಾಟಿ ಎಂಬ ಔಷಧವನ್ನು ಪತಂಜಲಿ ಸಂಸ್ಥೆ ಬಿಡುಗಡೆಮಾಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT