ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ 
ದೇಶ

ಪ್ರಚೋದನಕಾರಿ ಭಾಷಣ: ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗದ ಎಐಎಂಐಎಂ ವಕ್ತಾರ ಪಠಾಣ್

ವಿವಾದಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ ಅವರು, ಪ್ರಕರಣ ಸಂಬಂಧ ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ. 

ಕಲಬುರಗಿ: ವಿವಾದಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ ಅವರು, ಪ್ರಕರಣ ಸಂಬಂಧ ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ. 

ಪ್ರಕರಣ ಸಂಬಂಧ ಪಠಾಣ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು, ಈ ಸಂಬಂಧ ನಿನ್ನೆ ಪಠಾಣ್ ವಿಚಾರಣಗೆ ಹಾಜರಾಗಬೇಕಿತ್ತು. ಆದರೆ, ತಮ್ಮ ಜೀವಕ್ಕೆ ಬೆದರಿಕೆಯಿದ್ದು, ಸುರಕ್ಷತಾ ದೃಷ್ಟಿಯಿಂದ ವಿಚಾರಣಗೆ ಹಾಜರಾಗುತ್ತಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆಂದು ವರದಿಗಳು ತಿಳಿಸಿವೆ. 

ಈ ಕುರಿತಂತೆ ಪೊಲೀಸ್ ಆಯುಕ್ತ ಎಂಎನ್ ನಾಗರಾಜ್ ಅವರು ಹೇಳಿಕೆ ನೀಡಿ, ಜೀವಕ್ಕೆ ಬೆದರಿಕೆಯಿದೆ ಎಂದು ಪಠಾಣ್ ಹೆದರುತ್ತಿದ್ದಾರೆ. ಹೀಗಾಗಿ ಈ ಕುರಿತು ಪತ್ರವನ್ನು ಠಾಣೆಗೆ ಬರೆದು ಕಳುಹಿಸಿದ್ದಾರೆ. ಶನಿವಾರ ರಾತ್ರವರೆಗೂ ಕಾದು ನೋಡಲಾಗಿದೆ. ಆದರೂ ವಿಚಾರಣೆ ಹಾಜರಾಗಿಲ್ಲ. ಭಾನುವಾರ ಮತ್ತೆ ಎರಡನೇ ಬಾರಿ ನೋಟಿಸ್ ಜಾರಿ ಮಾಡಲಾಗುತ್ತದೆ. ಒಂದು ವೇಳೆ ಆ ನೋಟಿಸ್'ಗೂ ಪ್ರತಿಕ್ರಿಯೆ ನೀಡದಿದ್ದಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. 

ಒಂದು ವೇಳೆ ಪಠಾಣ್ ಅವರು ಭದ್ರತೆ ನೀಡುವಂತೆ ಮನವಿ ಮಾಡಿಕೊಂಡಿದ್ದೇ ಆದಲ್ಲಿ, ಭದ್ರತೆಯನ್ನು ನೀಡಲಾಗುತ್ತದೆ. ಮಹಾರಾಷ್ಟ್ರ ಸರ್ಕಾರದಿಂದಲೂ ಅವರಿಗೆ ಭದ್ರತೆ ಸಿಗಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT