ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ 
ದೇಶ

ಪ್ರಚೋದನಕಾರಿ ಭಾಷಣ: ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗದ ಎಐಎಂಐಎಂ ವಕ್ತಾರ ಪಠಾಣ್

ವಿವಾದಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ ಅವರು, ಪ್ರಕರಣ ಸಂಬಂಧ ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ. 

ಕಲಬುರಗಿ: ವಿವಾದಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ ಅವರು, ಪ್ರಕರಣ ಸಂಬಂಧ ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ. 

ಪ್ರಕರಣ ಸಂಬಂಧ ಪಠಾಣ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು, ಈ ಸಂಬಂಧ ನಿನ್ನೆ ಪಠಾಣ್ ವಿಚಾರಣಗೆ ಹಾಜರಾಗಬೇಕಿತ್ತು. ಆದರೆ, ತಮ್ಮ ಜೀವಕ್ಕೆ ಬೆದರಿಕೆಯಿದ್ದು, ಸುರಕ್ಷತಾ ದೃಷ್ಟಿಯಿಂದ ವಿಚಾರಣಗೆ ಹಾಜರಾಗುತ್ತಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆಂದು ವರದಿಗಳು ತಿಳಿಸಿವೆ. 

ಈ ಕುರಿತಂತೆ ಪೊಲೀಸ್ ಆಯುಕ್ತ ಎಂಎನ್ ನಾಗರಾಜ್ ಅವರು ಹೇಳಿಕೆ ನೀಡಿ, ಜೀವಕ್ಕೆ ಬೆದರಿಕೆಯಿದೆ ಎಂದು ಪಠಾಣ್ ಹೆದರುತ್ತಿದ್ದಾರೆ. ಹೀಗಾಗಿ ಈ ಕುರಿತು ಪತ್ರವನ್ನು ಠಾಣೆಗೆ ಬರೆದು ಕಳುಹಿಸಿದ್ದಾರೆ. ಶನಿವಾರ ರಾತ್ರವರೆಗೂ ಕಾದು ನೋಡಲಾಗಿದೆ. ಆದರೂ ವಿಚಾರಣೆ ಹಾಜರಾಗಿಲ್ಲ. ಭಾನುವಾರ ಮತ್ತೆ ಎರಡನೇ ಬಾರಿ ನೋಟಿಸ್ ಜಾರಿ ಮಾಡಲಾಗುತ್ತದೆ. ಒಂದು ವೇಳೆ ಆ ನೋಟಿಸ್'ಗೂ ಪ್ರತಿಕ್ರಿಯೆ ನೀಡದಿದ್ದಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. 

ಒಂದು ವೇಳೆ ಪಠಾಣ್ ಅವರು ಭದ್ರತೆ ನೀಡುವಂತೆ ಮನವಿ ಮಾಡಿಕೊಂಡಿದ್ದೇ ಆದಲ್ಲಿ, ಭದ್ರತೆಯನ್ನು ನೀಡಲಾಗುತ್ತದೆ. ಮಹಾರಾಷ್ಟ್ರ ಸರ್ಕಾರದಿಂದಲೂ ಅವರಿಗೆ ಭದ್ರತೆ ಸಿಗಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT