ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ 
ದೇಶ

ಪ್ರಚೋದನಕಾರಿ ಭಾಷಣ: ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗದ ಎಐಎಂಐಎಂ ವಕ್ತಾರ ಪಠಾಣ್

ವಿವಾದಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ ಅವರು, ಪ್ರಕರಣ ಸಂಬಂಧ ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ. 

ಕಲಬುರಗಿ: ವಿವಾದಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ ಅವರು, ಪ್ರಕರಣ ಸಂಬಂಧ ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ. 

ಪ್ರಕರಣ ಸಂಬಂಧ ಪಠಾಣ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು, ಈ ಸಂಬಂಧ ನಿನ್ನೆ ಪಠಾಣ್ ವಿಚಾರಣಗೆ ಹಾಜರಾಗಬೇಕಿತ್ತು. ಆದರೆ, ತಮ್ಮ ಜೀವಕ್ಕೆ ಬೆದರಿಕೆಯಿದ್ದು, ಸುರಕ್ಷತಾ ದೃಷ್ಟಿಯಿಂದ ವಿಚಾರಣಗೆ ಹಾಜರಾಗುತ್ತಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆಂದು ವರದಿಗಳು ತಿಳಿಸಿವೆ. 

ಈ ಕುರಿತಂತೆ ಪೊಲೀಸ್ ಆಯುಕ್ತ ಎಂಎನ್ ನಾಗರಾಜ್ ಅವರು ಹೇಳಿಕೆ ನೀಡಿ, ಜೀವಕ್ಕೆ ಬೆದರಿಕೆಯಿದೆ ಎಂದು ಪಠಾಣ್ ಹೆದರುತ್ತಿದ್ದಾರೆ. ಹೀಗಾಗಿ ಈ ಕುರಿತು ಪತ್ರವನ್ನು ಠಾಣೆಗೆ ಬರೆದು ಕಳುಹಿಸಿದ್ದಾರೆ. ಶನಿವಾರ ರಾತ್ರವರೆಗೂ ಕಾದು ನೋಡಲಾಗಿದೆ. ಆದರೂ ವಿಚಾರಣೆ ಹಾಜರಾಗಿಲ್ಲ. ಭಾನುವಾರ ಮತ್ತೆ ಎರಡನೇ ಬಾರಿ ನೋಟಿಸ್ ಜಾರಿ ಮಾಡಲಾಗುತ್ತದೆ. ಒಂದು ವೇಳೆ ಆ ನೋಟಿಸ್'ಗೂ ಪ್ರತಿಕ್ರಿಯೆ ನೀಡದಿದ್ದಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. 

ಒಂದು ವೇಳೆ ಪಠಾಣ್ ಅವರು ಭದ್ರತೆ ನೀಡುವಂತೆ ಮನವಿ ಮಾಡಿಕೊಂಡಿದ್ದೇ ಆದಲ್ಲಿ, ಭದ್ರತೆಯನ್ನು ನೀಡಲಾಗುತ್ತದೆ. ಮಹಾರಾಷ್ಟ್ರ ಸರ್ಕಾರದಿಂದಲೂ ಅವರಿಗೆ ಭದ್ರತೆ ಸಿಗಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ: MGNREGA, SIR, UGC ಕುರಿತು ಚರ್ಚೆಗೆ ಪ್ರತಿಪಕ್ಷಗಳ ಆಗ್ರಹ

'ನಾಚಿಕೆಗೇಡಿನ ಸಂಗತಿ', ಎಲ್ಲಾ ಪಕ್ಷಗಳ ದೊಡ್ಡ ಕುಳಗಳು 'ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ': ಪರಮೇಶ್ವರ್

FTA ಗೆ ಸಹಿ ಬೆನ್ನಲ್ಲೇ ಮಹತ್ವದ ಘೋಷಣೆ: ಭಾರತದಲ್ಲಿ ಮೊದಲ ಲೀಗಲ್ ಗೇಟ್‌ವೇ ಕಚೇರಿ ತೆರೆಯಲಿರುವ EU

ದಾವಣಗೆರೆ: ಮದುವೆಯಾಗಿ 45 ದಿನಕ್ಕೆ ಪ್ರಿಯಕರನೊಂದಿಗೆ ಪತ್ನಿ ಪರಾರಿ; ಪತಿ, ಸೋದರಮಾವ ಆತ್ಮಹತ್ಯೆ!

ಶಂಕರಾಚಾರ್ಯರಿಂದ ಯೋಗಿಗೆ 'ಅವಮಾನ': ಯುಪಿ CM ಬೆಂಬಲಿಸಿ ಜಿಎಸ್‌ಟಿ ಉಪ ಆಯುಕ್ತ ರಾಜೀನಾಮೆ!

SCROLL FOR NEXT