ಜಾದವ್‌ಪುರ್ ವಿಶ್ವವಿದ್ಯಾಲಯ 
ದೇಶ

ಸಿಎಎ ಪ್ರತಿಭಟನೆಯಲ್ಲಿ ಬಾಗವಹಿಸಿದ್ದ ಪೋಲಿಷ್ ವಿದ್ಯಾರ್ಥಿಗೆ ಭಾರತವನ್ನು ತೊರೆಯುವಂತೆ ಸೂಚನೆ

ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದ ಸಿಎಎ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಿದ ಜಾದವ್‌ಪುರ್ ವಿಶ್ವವಿದ್ಯಾಲಯದ ಪೋಲಿಷ್ ವಿದ್ಯಾರ್ಥಿಯನ್ನು  ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ದೇಶವನ್ನು ತೊರೆಯುವಂತೆ ಕೇಳಿದೆ ಎಂದು ವಿಶ್ವವಿದ್ಯಾನಿಲಯ  ಮೂಲಗಳು ಭಾನುವಾರ ತಿಳಿಸಿವೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದ ಸಿಎಎ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಿದ ಜಾದವ್‌ಪುರ್ ವಿಶ್ವವಿದ್ಯಾಲಯದ ಪೋಲಿಷ್ ವಿದ್ಯಾರ್ಥಿಯನ್ನು  ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ದೇಶವನ್ನು ತೊರೆಯುವಂತೆ ಕೇಳಿದೆ ಎಂದು ವಿಶ್ವವಿದ್ಯಾನಿಲಯ  ಮೂಲಗಳು ಭಾನುವಾರ ತಿಳಿಸಿವೆ.

ವಿಶ್ವ ಭಾರತಿ ವಿಶ್ವವಿದ್ಯಾನಿಲಯದ ಬಾಂಗ್ಲಾದೇಶದ ವಿದ್ಯಾರ್ಥಿನಿಯೊಬ್ಬಳಿಗೆ ಎಫ್‌ಆರ್‌ಆರ್‌ಒ ಇದೇ ರೀತಿಯ ನಿರ್ದೇಶನವನ್ನು ನೀಡಿದ್ದು, ಕ್ಯಾಂಪಸ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವಳಿಗೆ ಈ ಆದೇಶ ಕೊಡಲಾಗಿತ್ತು. ಇದೀಗ ಪೋಲಿಷ್  ವಿದ್ಯಾರ್ಥಿಗೆ ಸಹ ಇದೇ ಬಗೆಯಲ್ಲಿ ಹೇಳಲಾಗಿದೆ.

ಕಂಪಾರಿಟಿವ್ ಲಿಟರೇಚರ್ ವಿಭಾಗದ ಪೋಲಿಷ್ ವಿದ್ಯಾರ್ಥಿ ಕಮಿಲ್  ಸೀಡ್ಸಿನ್ಸ್ಕಿಯನ್ನು ಎಫ್‌ಆರ್‌ಆರ್‌ಒ ತನ್ನ ಕೋಲ್ಕತಾ ಕಚೇರಿಗೆ ಭೇಟಿ ನೀಡುವಂತೆ ಕೇಳಿದೆ. 

"ವಿದ್ಯಾರ್ಥಿ ವೀಸಾದಲ್ಲಿ ಭಾರತದಲ್ಲಿ ಉಳಿದುಕೊಂಡಿರುವ ವಿದೇಶಿ ಪ್ರಜೆಯ ವರ್ತನೆ ಹೀಗಿರುವುದು ಸರಿಯಲ್ಲ. ಎಂದು ದು ಆರೋಪಿಸಿ ನೋಟಿಸ್ ಸ್ವೀಕರಿಸಿದ ಹದಿನೈದು ದಿನಗಳೊಳಗೆ ದೇಶವನ್ನು ತೊರೆಯುವಂತೆ ಎಫ್‌ಆರ್‌ಆರ್‌ಒ ಕೇಳಿದೆ.ಇದಾಗಲೇ ವಿದ್ಯಾರ್ಥಿ ಸೀಡ್ಸಿನ್ಸ್ಕಿಗೆ ನೋಟೀಸ್ ನೀಡಲಾಗಿದೆ"

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಗರದ ಮೌಲಾಲಿ ಪ್ರದೇಶದಲ್ಲಿ ನಡೆದ ಸಿಎಎ ವಿರೋಧಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಸಿಡ್ಸಿನ್ಸ್ಕಿ ಗೆ ಎಫ್‌ಆರ್‌ಆರ್‌ಒ ನೋಟೀಸ್ ಜಾರಿ ಮಾಡಿದೆ."ಸೈಡ್ಸಿನ್ಸ್ಕಿಗೆ ಯಾವುದೇ ರಾಜಕೀಯ ಒಲವು ಇಲ್ಲ ಆದರೆ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿರುವ ಆತನ ಉತ್ಸಾಹ ಹಾಗೂ ಅಲ್ಲಿನ ಭಾವಚಿತ್ರಗಳು ಅವನನ್ನು ಸಂಕಷ್ಟಕ್ಕೆ ಸಿಲುಕಿಸಿದೆ. "ಮೂಲಗಳು ತಿಳಿಸಿವೆ.

ಇದೇವೇಳೆ ಈ ವರ್ಷ ತನ್ನ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು ಬರೆಯಬೇಕಿದ್ದ ವಿದ್ಯಾರ್ಥಿ ಸಿಡ್ಸಿನ್ಸ್ಕಿಯನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ.ಜಾದವ್‌ಪುರ್ ವಿಶ್ವವಿದ್ಯಾಲಯದಉಪಕುಲಪತಿ ಸುರಂಜನ್ ದಾಸ್ ಮತ್ತು ರಿಜಿಸ್ಟ್ರಾರ್ ಸ್ನೇಹಮಂಜು ಬಸು ಕೂಡ ಕರೆಗಳನ್ನು ಸ್ವೀಕರಿಸುತ್ತಿ;ಲ್ಲ. ಇನ್ನು ಈ ವಿದ್ಯಾರ್ಥಿ ಹಿಂದೆ ವಿಶ್ವ ಭಾರತಿ ವಿಶ್ವವಿದ್ಯಾಲಯದಲ್ಲಿ ಬಂಗಾಳಿ ಅಧ್ಯಯನ ಮಾಡಿದ್ದ ಎಂಬ ಮಾಹಿತಿ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT