ಉದ್ಧವ್ ಠಾಕ್ರೆ 
ದೇಶ

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವನೆ ತಳ್ಳಿಹಾಕಿದ ಶಿವಸೇನೆ

ರಾಜ್ಯದಲ್ಲಿ ಮುಸ್ಲಿಮರಿಗೆ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರ ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಶಿವಸೇನೆ ಭಾನುವಾರ ಹೇಳಿದೆ.

ಮುಂಬೈ: ರಾಜ್ಯದಲ್ಲಿ ಮುಸ್ಲಿಮರಿಗೆ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರ ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಶಿವಸೇನೆ ಭಾನುವಾರ ಹೇಳಿದೆ.

"ಮುಸ್ಲಿಮರಿಗೆ ಧರ್ಮ ಆಧಾರಿತ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಆತಂಕಕಾರಿ. ಶಿವಸೇನೆ ನೇತೃತ್ವದ ಸರ್ಕಾರ ಮುಸ್ಲಿಮರ ಒಲೈಕೆ ಮಾಡಬಾರದು. ಇದು ಹಿಂದೂ ಸಮಾಜದ ನಿರೀಕ್ಷೆ" ಎಂದು ವಿಶ್ವ ಹಿಂದೂ ಪರಿಷತ್ ಟ್ವೀಟ್ ಮಾಡಿತ್ತು. ಬಳಿಕ ಶಿವೇಸನೆ ಮೀಸಲಾತಿ ಪ್ರಸ್ತಾವನೆಯಲ್ಲಿ ತಳ್ಳಿಹಾಕಿದೆ.

ಎರಡು ದಿನಗಳ ಹಿಂದಷ್ಟೇ ಮಹಾರಾಷ್ಟ್ರ ಅಲ್ಪ ಸಂಖ್ಯಾತ ಸಚಿವ ನವಾಬ್ ಮಲಿಕ್ ಅವರು, ಶಿಕ್ಷಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಸಂಬಂಧ ಮಸೂದೆ ಮಂಡಿಸಲಾಗುವುದು ಎಂದು ಹೇಳಿದ್ದರು.

ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲಾತಿ ನೀಡಬಹುದು ಎಂದು ಹೇಳಿದೆ. ಈ ಬಗ್ಗೆ ಹಿಂದಿನ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಆದರೆ ನಾವು ಹೈಕೋರ್ಟ್ ಆದೇಶವನ್ನು ಶೀಘ್ರದಲ್ಲೇ ಜಾರಿಗೊಳಿಸುವಂತೆ ಎಂದು ಮಲಿಕ್ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT