ಸಂಗ್ರಹ ಚಿತ್ರ 
ದೇಶ

ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ

ನಿರ್ಭಯಾ ಹತ್ಯಾಚಾರಿಗಳ ಗಲ್ಲುಶಿಕ್ಷೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದು, ಇದೀಗ ಪ್ರಕರಣದ ಮತ್ತೋರ್ವ ಅಪರಾಧಿ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ನವದೆಹಲಿ: ನಿರ್ಭಯಾ ಹತ್ಯಾಚಾರಿಗಳ ಗಲ್ಲುಶಿಕ್ಷೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದು, ಇದೀಗ ಪ್ರಕರಣದ ಮತ್ತೋರ್ವ ಅಪರಾಧಿ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಈ ಕುರಿತಂತೆ ಅಪರಾಧಿ ಪವನ್ ಗುಪ್ತಾ ಪರ ವಕೀಲ ಎಪಿ ಸಿಂಗ್ ಅವರು ಇಂದು ದೆಹಲಿಯ ಪಾಟಿಯಾಲಾ ಕೋರ್ಟ್ ಗೆ ಮಾಹಿತಿ ನೀಡಿದ್ದು, ತಮ್ಮ ಕಕ್ಷೀದಾರ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಈ ಅರ್ಜಿಯ ಇತ್ಯರ್ಥವಾಗುವವರೆಗೂ ಗಲ್ಲು ಶಿಕ್ಷೆಜಾರಿ ಮುಂದೂಡುವಂತೆ ಮನವಿ ಮಾಡಿದ್ದರು. ಆದರೆ ಪವನ್ ಗುಪ್ತಾ ಸಲ್ಲಿಸಿದ್ದ ಈ ಕ್ಯುರೇಟಿವ್ ಅರ್ಜಿಯನ್ನು ಸೆಷನ್ಸ್ ಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾದ ಧರ್ಮೇಂದ್ರ ರಾಣಾ ಅವರು ವಜಾಗೊಳಿಸಿದ್ದಾರೆ. ಈ ಹಿಂದೆ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಲಾಗಿತ್ತು.

ಪ್ರಕರಣ ನಡೆದಾಗ ಪವನ್ ಗುಪ್ತಾ ಅಪ್ರಾಪ್ತ!
ಇನ್ನು 2012ರಲ್ಲಿ ಈ ಪ್ರಕರಣ ನಡೆದಾಗ ಪವನ್ ಗುಪ್ತಾ ಅಪ್ರಾಪ್ತನಾಗಿದ್ದ. ಈ ಅಂಶವನ್ನು ಪರಿಗಣಿಸದೇ ಕೋರ್ಟ್ ಗಲ್ಲು ಶಿಕ್ಷೆ ಜಾರಿ ಮಾಡಿತ್ತು. ಹೀಗಾಗಿ ಇದೀಗ ಈ ಎಲ್ಲ ಅಂಶಗಳನ್ನು ಸೇರಿಸಿ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಹೀಗಾಗಿ ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ವಕೀಲ ಎಪಿ ಸಿಂಗ್ ಹೇಳಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಹಿಂದೆ ಫೆ. 5ಕ್ಕೆ ಅಕ್ಷಯ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT