ಸಂಗ್ರಹ ಚಿತ್ರ 
ದೇಶ

ಬಂಗಾಳದಲ್ಲಿರುವ ಎಲ್ಲ ಬಾಂಗ್ಲಾದೇಶಿಗರೂ ಭಾರತೀಯರೇ.. ಎಲ್ಲರಿಗೂ ಭಾರತೀಯ ಪೌರತ್ವ ನೀಡಲಾಗಿದೆ: ಸಿಎಂ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ಎಲ್ಲ ಬಾಂಗ್ಲಾದೇಶಿಗರೂ ಭಾರತೀಯರೇ ಆಗಿದ್ದು, ಅವರಿಗೆ ಈಗಾಗಲೇ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ಎಲ್ಲ ಬಾಂಗ್ಲಾದೇಶಿಗರೂ ಭಾರತೀಯರೇ ಆಗಿದ್ದು, ಅವರಿಗೆ ಈಗಾಗಲೇ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಂಗಾಶದ ಕಾಲಿಯಾಗಂಜ್ ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಸಿಎಎ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ಎಲ್ಲ ಬಾಂಗ್ಲಾದೇಶಿಗರೂ ಭಾರತೀಯರೇ ಆಗಿದ್ದು, ಅವರಿಗೆ ಈಗಾಗಲೇ ಭಾರತೀಯ ಪೌರತ್ವ ನೀಡಲಾಗಿದೆ. ನೀವು ಹೊಸದಾಗಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ ಎಂದು  ಹೇಳಿದ್ದಾರೆ.

'ಬಂಗಾಳ ಮತ್ತೊಂದು ದೆಹಲಿಯಾಗಲು ನಾನು ಬಿಡುವುದಿಲ್ಲ. ಬಾಂಗ್ಲಾದೇಶದಿದ ಬಂದು ಇಲ್ಲಿ ವರ್ಷಗಳಿಂದಲೂ ನೆಲೆಸಿರುವವರು ಭಾರತೀಯರೇ ಆಗಿದ್ದಾರೆ. ಅವರಿಗೆಲ್ಲರಿಗೂ ಪೌರತ್ವ ದೊರೆತಿದ್ದು, ನೀವು ಈಗಾಗಲೇ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಿದ್ದೀರಿ. ಹೀಗಾಗಿ ಮತ್ತೆ ನೀವು ನಿಮ್ಮ ಪೌರತ್ವ ಸಾಬೀತು ಪಡಿಸುವ ಅವಶ್ಯಕತೆ ಇಲ್ಲ. ಚುನಾವಣೆ ಮುಗಿದ ಬಳಿಕ ಅವರು ಈಗ ನೀವು ಭಾರತೀಯರಲ್ಲ ಎಂದು ಹೇಳುತ್ತಿದ್ದಾರೆ. ಅವರ ಮಾತಿಗೆ ಸೊಪ್ಪು ಹಾಕಬೇಡಿ ಎಂದು ಹೇಳಿದ್ದಾರೆ.

ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಮಾತನಾಡಿದ ದೀದಿ, ಇದು ಪಶ್ಚಿಮ ಬಂಗಾಳ ಎನ್ನುವುದನ್ನು ಮರೆಯದಿರಿ. ದೆಹಲಿಯಲ್ಲಿ ಆಗಿದ್ದು ಇಲ್ಲಿ ಆಗಲು ಸಾಧ್ಯವೇ ಇಲ್ಲ. ಆಗಲು ನಾನು ಬಿಡುವುದೂ ಇಲ್ಲ, ಬಂಗಾಳ ಮತ್ತೊಂದು ದೆಹಲಿ ಅಥವಾ ಉತ್ತರ ಪ್ರದೇಶ ಆಗಲು ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT