ದೆಹಲಿ ಹಿಂಸಾಚಾರ 
ದೇಶ

ದೆಹಲಿ ರಕ್ತಪಾತಕ್ಕೆ ಹೈದರಾಬಾದ್ ವಿದ್ಯಾರ್ಥಿಗಳ ಬಳಸಿ ವದಂತಿ ಸಂದೇಶ ಸೃಷ್ಟಿ: ದೊಡ್ಡ ಸಂಚು ಬಯಲಿಗೆಳೆದ ಗುಪ್ತಚರ ಇಲಾಖೆ

ದೆಹಲಿಯಲ್ಲಿ ರಕ್ತಪಾತ ಸೃಷ್ಟಿಸಲು ಹೈದರಾಬಾದ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸಾಮಾಜಿನ ಮಾಧ್ಯಮಗಳಲ್ಲಿ ವದಂತಿಗಳನ್ನು ಹಬ್ಬಿಸಲು ಯತ್ನಗಳು ನಡೆದಿದ್ದು, ಈ ಕುರಿತ ದೊಡ್ಡ ಸಂಚನ್ನು ಗುಪ್ತಚರ ದಳದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ರಕ್ತಪಾತ ಸೃಷ್ಟಿಸಲು ಹೈದರಾಬಾದ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸಾಮಾಜಿನ ಮಾಧ್ಯಮಗಳಲ್ಲಿ ವದಂತಿಗಳನ್ನು ಹಬ್ಬಿಸಲು ಯತ್ನಗಳು ನಡೆದಿದ್ದು, ಈ ಕುರಿತ ದೊಡ್ಡ ಸಂಚನ್ನು ಗುಪ್ತಚರ ದಳದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. 

ವದಂತಿಗಳನ್ನು ಹಬ್ಬಿಸಲು ಬಳಸಲಾದ ನಕಲಿ ಸಂದೇಶಗಳ ಪಟ್ಟಿಯನ್ನು ಗುಪ್ತಚರ ದಳ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಇಂತಹದ್ದೇ ಹ್ಯಾಷ್ ಟ್ಯಾಗ್ ಬಳಸಿ ಸಂದೇಶಗಳನ್ನು ಸೃಷ್ಟಿಸಬೇಕು ಎಂಬ ಸೂಚನೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂಬ ವಿಚಾರ ತಿಳಿದುಬಂದಿದೆ. 

ಈ ನಡುವೆ ಭಾರತದಲ್ಲಿನ ಮುಸ್ಲಿಮರನ್ನು ಪ್ರಚೋದಿಸುವ ಪಾಕಿಸ್ತಾನ ಸರ್ಕಾರದ ಟ್ವಿಟರ್ ಖಾತೆಯನ್ನು ಕೂಡ ಬಳಸಿಕೊಳ್ಳಲಾಗುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 

ಜನಗಣಮನ ಹೇಳಲು ಬಲವಂತಪಡಿಸಿ ಫೈಜಾನ್ ಎಂಬಾದನನನ್ನು ದೆಹಲಿ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದು, ಬಳಿಕ ಆತ ಸಾವನ್ನಪ್ಪಿದ್ದಾನೆ. ಫೈಜಾನ್ ಸಾವಿಗೆ ದೆಹಲಿ ಪೊಲೀಸರೇ ಹೊಣೆ. ಆತ ಯಾವುದೇ ವೈದ್ಯಕೀಯ ಉಪಚಾರವಿಲ್ಲದೇ ಸಾವನ್ನಪ್ಪಿದ್ದಾನೆ. ದೆಹಲಿ ಪೊಲೀಸರು ಕೊಲೆಗಾರರು. ಫೈಜಾನ್'ಗೆ ನ್ಯಾಯಬೇಕು. ಫೈಜಾನ್'ಗೆ ನ್ಯಾಯಬೇಕು. ಅಮಿತ್ ಶಾ ರಾಜೀನಾಮೆ ನೀಡಬೇಕು. ಫೈಜಾನ್ ಸಾವಿಗೆ ಅಮಿತ್ ಶಾ, ದೆಹಲಿ ಪೊಲೀಸರು ಮೌನ ತಾಳಿಸಿದ್ದಾರೆಂದು ನಕಲಿ ಟ್ವೀಟ್ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದ್ದಾರೆ ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ