ದೆಹಲಿ ಹಿಂಸಾಚಾರ 
ದೇಶ

ದೆಹಲಿ ರಕ್ತಪಾತಕ್ಕೆ ಹೈದರಾಬಾದ್ ವಿದ್ಯಾರ್ಥಿಗಳ ಬಳಸಿ ವದಂತಿ ಸಂದೇಶ ಸೃಷ್ಟಿ: ದೊಡ್ಡ ಸಂಚು ಬಯಲಿಗೆಳೆದ ಗುಪ್ತಚರ ಇಲಾಖೆ

ದೆಹಲಿಯಲ್ಲಿ ರಕ್ತಪಾತ ಸೃಷ್ಟಿಸಲು ಹೈದರಾಬಾದ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸಾಮಾಜಿನ ಮಾಧ್ಯಮಗಳಲ್ಲಿ ವದಂತಿಗಳನ್ನು ಹಬ್ಬಿಸಲು ಯತ್ನಗಳು ನಡೆದಿದ್ದು, ಈ ಕುರಿತ ದೊಡ್ಡ ಸಂಚನ್ನು ಗುಪ್ತಚರ ದಳದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ರಕ್ತಪಾತ ಸೃಷ್ಟಿಸಲು ಹೈದರಾಬಾದ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸಾಮಾಜಿನ ಮಾಧ್ಯಮಗಳಲ್ಲಿ ವದಂತಿಗಳನ್ನು ಹಬ್ಬಿಸಲು ಯತ್ನಗಳು ನಡೆದಿದ್ದು, ಈ ಕುರಿತ ದೊಡ್ಡ ಸಂಚನ್ನು ಗುಪ್ತಚರ ದಳದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. 

ವದಂತಿಗಳನ್ನು ಹಬ್ಬಿಸಲು ಬಳಸಲಾದ ನಕಲಿ ಸಂದೇಶಗಳ ಪಟ್ಟಿಯನ್ನು ಗುಪ್ತಚರ ದಳ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಇಂತಹದ್ದೇ ಹ್ಯಾಷ್ ಟ್ಯಾಗ್ ಬಳಸಿ ಸಂದೇಶಗಳನ್ನು ಸೃಷ್ಟಿಸಬೇಕು ಎಂಬ ಸೂಚನೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂಬ ವಿಚಾರ ತಿಳಿದುಬಂದಿದೆ. 

ಈ ನಡುವೆ ಭಾರತದಲ್ಲಿನ ಮುಸ್ಲಿಮರನ್ನು ಪ್ರಚೋದಿಸುವ ಪಾಕಿಸ್ತಾನ ಸರ್ಕಾರದ ಟ್ವಿಟರ್ ಖಾತೆಯನ್ನು ಕೂಡ ಬಳಸಿಕೊಳ್ಳಲಾಗುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 

ಜನಗಣಮನ ಹೇಳಲು ಬಲವಂತಪಡಿಸಿ ಫೈಜಾನ್ ಎಂಬಾದನನನ್ನು ದೆಹಲಿ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದು, ಬಳಿಕ ಆತ ಸಾವನ್ನಪ್ಪಿದ್ದಾನೆ. ಫೈಜಾನ್ ಸಾವಿಗೆ ದೆಹಲಿ ಪೊಲೀಸರೇ ಹೊಣೆ. ಆತ ಯಾವುದೇ ವೈದ್ಯಕೀಯ ಉಪಚಾರವಿಲ್ಲದೇ ಸಾವನ್ನಪ್ಪಿದ್ದಾನೆ. ದೆಹಲಿ ಪೊಲೀಸರು ಕೊಲೆಗಾರರು. ಫೈಜಾನ್'ಗೆ ನ್ಯಾಯಬೇಕು. ಫೈಜಾನ್'ಗೆ ನ್ಯಾಯಬೇಕು. ಅಮಿತ್ ಶಾ ರಾಜೀನಾಮೆ ನೀಡಬೇಕು. ಫೈಜಾನ್ ಸಾವಿಗೆ ಅಮಿತ್ ಶಾ, ದೆಹಲಿ ಪೊಲೀಸರು ಮೌನ ತಾಳಿಸಿದ್ದಾರೆಂದು ನಕಲಿ ಟ್ವೀಟ್ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದ್ದಾರೆ ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT