ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ 
ದೇಶ

ಸದನದಲ್ಲಿ ಹಲ್ಲೆ: ಓಂ ಬಿರ್ಲಾಗೆ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ದೂರು

ರಾಜಸ್ತಾನದ ಬಿಜೆಪಿ ಸಂಸದೆ ಜಸ್‌ಕೌರ್ ಮೀನಾ ಸದನದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸೋಮವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ದೂರು ಸಲ್ಲಿಸಿದ್ದಾರೆ.

ನವದೆಹಲಿ: ರಾಜಸ್ತಾನದ ಬಿಜೆಪಿ ಸಂಸದೆ ಜಸ್‌ಕೌರ್ ಮೀನಾ ಸದನದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸೋಮವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ದೂರು ಸಲ್ಲಿಸಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ದೆಹಲಿ ಹಿಂಸಾಚಾರದ ಕುರಿತು ತೀವ್ರ ಪ್ರತಿಭಟನೆ ನಡೆಸಿದ್ದ ಪ್ರತಿಪಕ್ಷಗಳು ಗೃಹಸಚಿವ ಅಮಿತ್‌ಶಾ ಅವರ ರಾಜೀನಾಮೆಗೆ ಆಗ್ರಹಿಸಿದ್ದವು. ಈ ಸಂದರ್ಭ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ತಳ್ಳಾಟ ನಡೆದಿತ್ತು.

ಇದೀಗ ಈ ಬಗ್ಗೆ ಸ್ಪೀಕರ್ ಓಂ ಬಿರ್ಲಾಗೆ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ದೂರು ನೀಡಿದ್ದು, ಬಿಜೆಪಿ ಸಂಸದೆ ಜಸ್‌ಕೌರ್ ಮೀನಾ (ರಾಜಸ್ಥಾನ) ಅವರು ಸದನದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ತಕ್ಷಣ ಕ್ರಮವನ್ನು ತೆಗೆದುಕೊಳ್ಳುವಂತೆ ಕೋರಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ದಿಲ್ಲಿ ಹಿಂಸಾಚಾರದ ಕುರಿತು ತೀವ್ರ ಪ್ರತಿಭಟನೆ ನಡೆಸಿದ್ದ ಪ್ರತಿಪಕ್ಷಗಳು ಗೃಹಸಚಿವ ಅಮಿತ್‌ಶಾ ಅವರ ರಾಜೀನಾಮೆಗೆ ಆಗ್ರಹಿಸಿದ್ದವು. ಈ ಸಂದರ್ಭ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ತಳ್ಳಾಟ ನಡೆದಿತ್ತು.

“ತಾನು ದಲಿತ ಸಮುದಾಯದವಳು ಮತ್ತು ಮಹಿಳೆಯಾಗಿದ್ದೇನೆಂಬ ಕಾರಣಕ್ಕೆ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆಯೇ” ಎಂದೂ ಹರಿದಾಸ್ ದೂರಿನಲ್ಲಿ ಪ್ರಶ್ನಿಸಿದ್ದಾರೆ.

ಕಳೆದ ವರ್ಷದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಸಂಬಂಧಿಸಿ ಸದನದ ಅಂಗಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹರಿದಾಸ್ ಸೇರಿದಂತೆ ತನ್ನ ಇಬ್ಬರು ಮಹಿಳಾ ಸಂಸದರ ಮೇಲೆ ಮಾರ್ಷಲ್‌ಗಳು ಕೈ ಮಾಡಿದ್ದಾರೆ ಎಂದು ಕಾಂಗ್ರೆಸ್ ಸ್ಪೀಕರ್ ಬಿರ್ಲಾ ಅವರಿಗೆ ದೂರು ಸಲ್ಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯೋಗೇಶ್ ಗೌಡ ಹತ್ಯೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ, ಮಹತ್ವದ ತೀರ್ಪು!

ಟಿ20 ವಿಶ್ವಕಪ್‌ಗೆ ಕಳಂಕ: ಚೆನ್ನೈ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ? ತನಿಖೆ ಕೈಗೊಂಡ ICC!

ಇದು ಮಹಿಳಾ ಮೀಸಲಾತಿ ಮಸೂದೆ ಅಲ್ಲ, ಸಂವಿಧಾನದ ಮೇಲೆ ಮನುವಾದ ಹೇರುವ ಮಸೂದೆ: ರಾಹುಲ್ ಗಾಂಧಿ

ದಾವಣಗೆರೆ ದಂಗಲ್: ದೆಹಲಿ ನಾಯಕರ ಸೂಚನೆ ಮೇರೆಗೆ ಮುಸ್ಲಿಂ ನಾಯಕರ ವಿರುದ್ಧ ಕ್ರಮ; ಡಿಕೆಶಿ

Delimitation Bill 2026: 'ಮೋದಿ ಜಾದೂಗಾರ' ಎಂದ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ರಾಜನಾಥ್ ಸಿಂಗ್ ಆಗ್ರಹ!

SCROLL FOR NEXT