ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ 
ದೇಶ

ಸದನದಲ್ಲಿ ಹಲ್ಲೆ: ಓಂ ಬಿರ್ಲಾಗೆ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ದೂರು

ರಾಜಸ್ತಾನದ ಬಿಜೆಪಿ ಸಂಸದೆ ಜಸ್‌ಕೌರ್ ಮೀನಾ ಸದನದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸೋಮವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ದೂರು ಸಲ್ಲಿಸಿದ್ದಾರೆ.

ನವದೆಹಲಿ: ರಾಜಸ್ತಾನದ ಬಿಜೆಪಿ ಸಂಸದೆ ಜಸ್‌ಕೌರ್ ಮೀನಾ ಸದನದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸೋಮವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ದೂರು ಸಲ್ಲಿಸಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ದೆಹಲಿ ಹಿಂಸಾಚಾರದ ಕುರಿತು ತೀವ್ರ ಪ್ರತಿಭಟನೆ ನಡೆಸಿದ್ದ ಪ್ರತಿಪಕ್ಷಗಳು ಗೃಹಸಚಿವ ಅಮಿತ್‌ಶಾ ಅವರ ರಾಜೀನಾಮೆಗೆ ಆಗ್ರಹಿಸಿದ್ದವು. ಈ ಸಂದರ್ಭ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ತಳ್ಳಾಟ ನಡೆದಿತ್ತು.

ಇದೀಗ ಈ ಬಗ್ಗೆ ಸ್ಪೀಕರ್ ಓಂ ಬಿರ್ಲಾಗೆ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ದೂರು ನೀಡಿದ್ದು, ಬಿಜೆಪಿ ಸಂಸದೆ ಜಸ್‌ಕೌರ್ ಮೀನಾ (ರಾಜಸ್ಥಾನ) ಅವರು ಸದನದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ತಕ್ಷಣ ಕ್ರಮವನ್ನು ತೆಗೆದುಕೊಳ್ಳುವಂತೆ ಕೋರಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ದಿಲ್ಲಿ ಹಿಂಸಾಚಾರದ ಕುರಿತು ತೀವ್ರ ಪ್ರತಿಭಟನೆ ನಡೆಸಿದ್ದ ಪ್ರತಿಪಕ್ಷಗಳು ಗೃಹಸಚಿವ ಅಮಿತ್‌ಶಾ ಅವರ ರಾಜೀನಾಮೆಗೆ ಆಗ್ರಹಿಸಿದ್ದವು. ಈ ಸಂದರ್ಭ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ತಳ್ಳಾಟ ನಡೆದಿತ್ತು.

“ತಾನು ದಲಿತ ಸಮುದಾಯದವಳು ಮತ್ತು ಮಹಿಳೆಯಾಗಿದ್ದೇನೆಂಬ ಕಾರಣಕ್ಕೆ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆಯೇ” ಎಂದೂ ಹರಿದಾಸ್ ದೂರಿನಲ್ಲಿ ಪ್ರಶ್ನಿಸಿದ್ದಾರೆ.

ಕಳೆದ ವರ್ಷದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಸಂಬಂಧಿಸಿ ಸದನದ ಅಂಗಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹರಿದಾಸ್ ಸೇರಿದಂತೆ ತನ್ನ ಇಬ್ಬರು ಮಹಿಳಾ ಸಂಸದರ ಮೇಲೆ ಮಾರ್ಷಲ್‌ಗಳು ಕೈ ಮಾಡಿದ್ದಾರೆ ಎಂದು ಕಾಂಗ್ರೆಸ್ ಸ್ಪೀಕರ್ ಬಿರ್ಲಾ ಅವರಿಗೆ ದೂರು ಸಲ್ಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT