ಕಪಿಲ್ ಮಿಶ್ರಾ 
ದೇಶ

ಕಪಿಲ್ ಮಿಶ್ರಾಗೆ 'ವೈ'ದರ್ಜೆಯ ಭದ್ರತೆ; ಜೈಲಿನಲ್ಲಿರಬೇಕಾದವರಿಗೆ ಬಿಜೆಪಿಯಿಂದ ರಕ್ಷಣೆ ಎಂದು ಕಾಂಗ್ರೆಸ್ ಆರೋಪ 

ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದವರು ಎಂದು ಆರೋಪಿಸಲ್ಪಟ್ಟ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರಿಗೆ 24*7 ಗಂಟೆಗಳ ವೈ ದರ್ಜೆಯ ಭದ್ರತೆ ನೀಡಲಾಗಿದೆ. ಕಪಿಲ್ ಮಿಶ್ರಾ ಅವರ ಜೀವಕ್ಕೆ ಅಪಾಯವಿದೆ ಎಂದು ಮನಗಂಡು ಅವರಿಗೆ ವೈ ದರ್ಜೆಯ ಭದ್ರತೆ ನೀಡಲಾಗಿದೆ. 6 ಮಂದಿ ಭದ್ರತಾ ಸಿಬ್ಬಂದಿ ಅವರನ್ನು ಹಗಲು ರಾತ್ರಿ ಕಾಯಲಿದ್ದಾರೆ.

ನವದೆಹಲಿ; ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದವರು ಎಂದು ಆರೋಪಿಸಲ್ಪಟ್ಟ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರಿಗೆ 24*7 ಗಂಟೆಗಳ ವೈ ದರ್ಜೆಯ ಭದ್ರತೆ ನೀಡಲಾಗಿದೆ. ಕಪಿಲ್ ಮಿಶ್ರಾ ಅವರ ಜೀವಕ್ಕೆ ಅಪಾಯವಿದೆ ಎಂದು ಮನಗಂಡು ಅವರಿಗೆ ವೈ ದರ್ಜೆಯ ಭದ್ರತೆ ನೀಡಲಾಗಿದೆ. 6 ಮಂದಿ ಭದ್ರತಾ ಸಿಬ್ಬಂದಿ ಅವರನ್ನು ಹಗಲು ರಾತ್ರಿ ಕಾಯಲಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ ಮೊದಲು ಕೋಮು ಗಲಭೆ ಸೃಷ್ಟಿಗೆ ಕಪಿಲ್ ಮಿಶ್ರಾ ಅವರ ಹೇಳಿಕೆಗಳೇ ಕಾರಣ, ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಬೆದರಿಕೆಗಳು ಬರುತ್ತಿರುವುದರಿಂದ ತಮಗೆ ಭದ್ರತೆ ಒದಗಿಸಬೇಕೆಂದು ಕಪಿಲ್ ಮಿಶ್ರಾ ಕೇಳಿಕೊಂಡಿದ್ದರು. 

ಇವರಿಗೆ ನೀಡಿರುವ ಭದ್ರತೆ ಬಗ್ಗೆ ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ಲ್ ಪ್ರತಿಕ್ರಿಯಿಸಿ, ಮಿಶ್ರಾ ಅವರನ್ನು ಬಂಧಿಸುವ ಬದಲು ಬಿಜೆಪಿ ದ್ವೇಷ ಹರಡುವವರನ್ನು ರಕ್ಷಿಸುತ್ತಿದೆ. ಕಪಿಲ್ ಮಿಶ್ರಾ ಅವರನ್ನು ಬಂಧಿಸುವ ಬದಲು ವೈ ದರ್ಜೆಯ ಭದ್ರತೆ ನೀಡುತ್ತಿದ್ದಾರೆ. ಜೈಲಿನಲ್ಲಿರಬೇಕಾದ ವ್ಯಕ್ತಿಗೆ ಬಿಜೆಪಿ ರತ್ನಗಂಬಳಿ ಹಾಕಿ ರಕ್ಷಿಸುತ್ತಿದೆ, ಈ ಮೂಲಕ ತೆರಿಗೆದಾರರ ಹಣವನ್ನು ಬಿಜೆಪಿ ದುರುಪಯೋಗ ಮಾಡುತ್ತಿದೆ ಎಂದು ಶೆರ್ಗಿಲ್ಲ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT