ಬಿಜೆಪಿ ಸಂಸದೀಯ ಪಕ್ಷ ಸಭೆಯಲ್ಲಿ ನಾಯಕರು 
ದೇಶ

ವಿರೋಧ ಪಕ್ಷದವರಿಗೆ ಸ್ವ ಹಿತಾಸಕ್ತಿ ಮುಖ್ಯವಾದರೆ, ನಮಗೆ ದೇಶದ ಹಿತಾಸಕ್ತಿ ಮುಖ್ಯ: ಪ್ರಧಾನಿ ಮೋದಿ

ದೇಶದ ಬೆಳವಣಿಗೆಗೆ ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಒಗ್ಗಟ್ಟಿನ ಅವಶ್ಯಕತೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ದೇಶದ ಬೆಳವಣಿಗೆಗೆ ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಒಗ್ಗಟ್ಟಿನ ಅವಶ್ಯಕತೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಬಿಜೆಪಿ ಸಂಸದೀಯ ಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಶಾಂತಿ, ಸಾಮರಸ್ಯ ಕಾಪಾಡಲು ಸಂಸದರು, ಜನಪ್ರತಿನಿಧಿಗಳು ಮುಂದಾಳತ್ವ ವಹಿಸಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ನಮಗೆ ದೇಶದ ಹಿತಾಸಕ್ತಿ ಮುಖ್ಯ: ಕೆಲವು ಪಕ್ಷಗಳಿಗೆ ರಾಜಕೀಯ ಹಿತಾಸಕ್ತಿಗಳೇ ಮುಖ್ಯವಾಗುತ್ತದೆ ಮತ್ತು ಶ್ರೇಷ್ಠವಾಗುತ್ತದೆ, ಆದರೆ ಬಿಜೆಪಿಗೆ ರಾಷ್ಟ್ರದ ಹಿತಾಸಕ್ತಿ ಮುಖ್ಯ, ದೇಶ, ದೇಶದ ಹಿತಾಸಕ್ತಿ, ಅಭಿವೃದ್ಧಿ ನಮ್ಮ ಮಂತ್ರವಾಗಿದೆ ಎಂದರು. 

ಇಂದಿಗೂ ಕೆಲವು ಪಕ್ಷಗಳಿಗೆ ರಾಷ್ಟ್ರದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಗಳೇ ಮೇಲೆನಿಸುತ್ತದೆ. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಕೂಡ ದೇಶದ ಹಿತಾಸಕ್ತಿ ಮತ್ತು ಪಕ್ಷದ ಹಿತಾಸಕ್ತಿಗಳು ಚರ್ಚೆಗೆ ಬಂದಿದ್ದವು. ಈಗಲೂ ಕೂಡ ಅಂತಹದ್ದೇ ವಾತಾವರಣ ಕಂಡುಬರುತ್ತಿದೆ ಎಂದು ಪ್ರಧಾನ ಮಂತ್ರಿಗಳು ಸಭೆಯಲ್ಲಿ ಹೇಳಿದ್ದಾಗಿ ಹೊರಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸುದ್ದಿಗಾರರಿಗೆ ತಿಳಿಸಿದರು.

ಸ್ವಾತಂತ್ರ್ಯ ಸಂಗ್ರಾಮ ಸಮಯದಲ್ಲಿ ವಂದೇ ಮಾತರಂ ವಿಷಯ ತೀವ್ರ ಚರ್ಚೆಗೊಳಗಾಗಿತ್ತು. ಭಾರತ್ ಮಾತಾ ಕಿ ಜೈ ವಿಚಾರದಲ್ಲಿ ಕೂಡ ಅಂತಹದ್ದೇ ವಿವಾದ ಸೃಷ್ಟಿಸುವ ಪ್ರಯತ್ನ ನಡೆಯಿತು ಎಂದು ಸಭೆಯಲ್ಲಿ ಪ್ರಧಾನಿ ಹೇಳಿದರು. 

ಈಶಾನ್ಯ ದೆಹಲಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದು 40ಕ್ಕೂ ಹೆಚ್ಚು ಮಂದಿ ಮೃತಪಟ್ಟು, ನೂರಾರು ಮಂದಿಗೆ ಗಾಯವಾಗಿರುವ ಘಟನೆ ಬಳಿಕ ಪ್ರಧಾನಿ ಮೋದಿಯವರು ಇಂದು ಬಿಜೆಪಿ ಸಂಸದೀಯ ಸಭೆಯಲ್ಲಿ ಈ ಮಾತು ಹೇಳಿರುವುದು ಪ್ರಸ್ತುತವಾಗಿದೆ. 

ಸಂಸತ್ತಿನಲ್ಲಿ ಬಜೆಟ್ ಅಧಿವೇಶನದಲ್ಲಿ ಮೋದಿ ಸರ್ಕಾರವನ್ನು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT