ಮಹಾ ಸಿಎಂ ಉದ್ಧವ್ ಠಾಕ್ರೆ 
ದೇಶ

ಮುಂಬೈ: ಸಿಎಂ ಉದ್ಧವ್ ಠಾಕ್ರೆ ನಿವಾಸ ಬಳಿ ವಾಂಟೆಡ್ ಕ್ರಿಮಿನಲ್ ಬಂಧನ; ಪಿಸ್ತೂಲ್, ಮದ್ದುಗುಂಡು ವಶ 

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಬಳಿ ವಾಂಟೆಡ್ ಕ್ರಿಮಿನಲ್ ನ್ನು ಬಂಧಿಸಿ ಆತನಿಂದ ದೇಶಿ ನಿರ್ಮಿತ ಪಿಸ್ತೂಲ್, ಏಳು ಜೀವಂತ ಮದ್ದು ಗುಂಡುಗಳನ್ನು, ಸಿಡಿಮದ್ದುಗಳನ್ನು ಪೊಲೀಸರು ಮಂಗಳವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ.

ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಬಳಿ ವಾಂಟೆಡ್ ಕ್ರಿಮಿನಲ್ ನ್ನು ಬಂಧಿಸಿ ಆತನಿಂದ ದೇಶಿ ನಿರ್ಮಿತ ಪಿಸ್ತೂಲ್, ಏಳು ಜೀವಂತ ಮದ್ದು ಗುಂಡುಗಳನ್ನು, ಸಿಡಿಮದ್ದುಗಳನ್ನು ಪೊಲೀಸರು ಮಂಗಳವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ.

ಮುಂಬೈಯ ಬಾಂದ್ರಾ ಪೂರ್ವದಲ್ಲಿರುವ ಉದ್ಧವ್ ಠಾಕ್ರೆ ನಿವಾಸದ ಹೊರಗೆ ಮುಂಬೈ ಅಪರಾಧ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನನ್ನು ಇರ್ಶಾದ್ ಖಾನ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮುಂಬೈ, ಥಾಣೆ ಮತ್ತು ಗುಜರಾತ್ ಗಳಲ್ಲಿ ಕಳ್ಳತನ, ದರೋಡೆ, ಕೊಲೆ ಪ್ರಕರಣಗಳು ದಾಖಲಾಗಿದೆ.

ಉದ್ಧವ್ ಠಾಕ್ರೆ ಅವರ ನಿವಾಸದ ಸುತ್ತಮುತ್ತ ತನ್ನ ಸಹಚರರ ಜೊತೆ ಸೇರಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಇರ್ಶಾದ್ ನ ಚಲನವಲನ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಂಧಿಸಿದರು. ಆತನ ಬಳಿಯಿಂದ ಒಂದು ದೇಶಿ ನಿರ್ಮಿತ ರಿವಾಲ್ವರ್, ಏಳು ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT