ನಿರ್ಭಯಾ ಅಪರಾಧಿಗಳಿಗೆ ಗಲ್ಲು: ದೆಹಲಿ ನ್ಯಾಯಾಲಯದಿಂದ ನಾಳೆ ಹೊಸ ಡೆತ್ ವಾರಂಟ್ ಜಾರಿ 
ದೇಶ

ನಿರ್ಭಯಾ ಅಪರಾಧಿಗಳಿಗೆ ಗಲ್ಲು: ದೆಹಲಿ ನ್ಯಾಯಾಲಯದಿಂದ ನಾಳೆ ಹೊಸ ಡೆತ್ ವಾರಂಟ್ ಜಾರಿ

2012 ರ ಡಿಸೆಂಬರ್‌ನ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಹೊಸ ಡೆತ್ ವಾರಂಟ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದ್ದು ನಾಳೆ ಮಧ್ಯಾಹ್ನ  2 ಗಂಟೆಗೆ ಈ ಸಂಬಂಧ ವಿಚಾರಣೆಗೆ ಕೋರ್ಟ್ ತೀರ್ಮಾನಿಸಿದೆ.

ನವದೆಹಲಿ: 2012 ರ ಡಿಸೆಂಬರ್‌ನ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಹೊಸ ಡೆತ್ ವಾರಂಟ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದ್ದು ನಾಳೆ ಮಧ್ಯಾಹ್ನ  2 ಗಂಟೆಗೆ ಈ ಸಂಬಂಧ ವಿಚಾರಣೆಗೆ ಕೋರ್ಟ್ ತೀರ್ಮಾನಿಸಿದೆ.

ಹೆಚ್ಚುವರಿ ಸೆಷನ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅರ್ಜಿ ಕುರಿತು ಪ್ರತಿಕ್ರಿಯೆ ಕೋರಿ ಅಪರಾಧಿಗಳಿಗೆ ನೋಟಿಸ್ ನೀಡಿದ್ದಾರೆ

ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲ ಇರ್ಫಾನ್ ಅಹ್ಮದ್, ಇಂದು ಮರಣದಂಡನೆಗೆ ಹೊಸ ದಿನಾಂಕವನ್ನು ನೀಡುವಂತೆ ಕೋರಿದ್ದರು. ಅಪರಾಧಿಗಳು ತಮಗೆ ಲಭ್ಯವಿರುವ ಎಲ್ಲಾ ಕಾನೂನು ಮಾರ್ಗಗಳನ್ನು ಸಹ ಬಳಸಿಕೊಂಡಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. "ಪವನ್ ಗುಪ್ತಾ ಅವರಿಗೆ ಲಭ್ಯವಿದ್ದ ಏಕೈಕ ಖಾನೂನು ಪರಿಹಾರ ಸಹ ಮುಗಿದಿದೆ. ಇನ್ನು ಯಾವ ಅಪರಾಧಿಗಳಿಗೆ ಯಾವುದೇ ಬಗೆಯ ಕಾನೂನಾತ್ಮಕ ಮಾರ್ಗಗಳು ಉಳಿದಿಲ್ಲ. ಹಾಗಾಗಿ , ದಯವಿಟ್ಟು ಇಂದು ಮರಣದಂಡನೆ ವಿಧಿಸಲು ಹೊಸ ದಿನಾಂಕವನ್ನು ನಿಗದಿಗೊಳಿಸಿ ಆದೇಶ ನೀಡಬೇಕು." ಎಂದು ಅವರು ಹೇಳಿದರು.

ಇದಕ್ಕೆ ಮುನ್ನ ನಾಲ್ವರು ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಗುಪ್ತಾ ಅವರ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಕೋವಿಂದ್ ವಜಾಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT