ಸಾಂದರ್ಭಿಕ ಚಿತ್ರ 
ದೇಶ

ಗುರುಗ್ರಾಮ್ ಪೇಟಿಎಂ ಉದ್ಯೋಗಿಗೆ ಕೊರೋನಾ ವೈರಸ್ ಪಾಸಿಟಿವ್, ಮನೆಯಿಂದ ಕೆಲಸ ಮಾಡುವಂತೆ ಎಲ್ಲಾ ಸಿಬ್ಬಂದಿಗೆ ಸೂಚನೆ

ಪೇಟಿಎಂ ಉದ್ಯೋಗಿಯೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಕಂಪನಿಯು ತನ್ನ ಎಲ್ಲಾ ಸಿಬ್ಬಂದಿಗೂ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದೆ.

ಗುರುಗ್ರಾಮ್: ಪೇಟಿಎಂ ಉದ್ಯೋಗಿಯೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಕಂಪನಿಯು ತನ್ನ ಎಲ್ಲಾ ಸಿಬ್ಬಂದಿಗೂ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದೆ.

ಇತ್ತೀಚಿಗೆ ಇಟಲಿಯಲ್ಲಿ ರಜೆ ಕಳೆದ ಬಂದ ಕಂಪನಿಯ ಉದ್ಯೋಗಿಯೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡು ಬಂದಿದ್ದು, ಮುಂದಿನ ಎರಡು ದಿನಗಳ ಕಾಲ ಮನೆಯಿಂದ ಕೆಲಸ ಮಾಡುವಂತೆ ಎಲ್ಲಾ ಸಿಬ್ಬಂದಿಗೂ ಸೂಚಿಸಿರುವುದಾಗಿ ಪೇಟಿಎಂ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. 29 ಪ್ರಕರಣಗಳ ಪೈಕಿ 17 ಪ್ರಕರಣಗಳು ಜೈಪುರದಲ್ಲಿಯೇ ಪತ್ತೆಯಾಗಿದ್ದು, 16 ಇಟಲಿ ಪ್ರವಾಸಿಗರಲ್ಲಿ ಹಾಗೂ ಓರ್ವ ಭಾರತದ ಚಾಲಕನಲ್ಲಿ ಮಾರಣಾಂತಿಕ ಸೋಂಕು ಪತ್ತೆಯಾಗಿದೆ.

ವಿದೇಶದಿಂದ ಬರುವ ಪ್ರತೀಯೊಬ್ಬರೂ ತಪಾಸಣೆಗೊಳಗಾಗಲಿದ್ದಾರೆ. ನಿನ್ನೆಯವರೆಗೂ ನಾವು ಒಟ್ಟು 5.89 ಲಕ್ಷ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದ್ದೇವೆ. ಪ್ರಮುಖ ಹಾಗೂ ಸಣ್ಣ ಬಂದರುಗಳಲ್ಲಿ 15 ಸಾವಿರಕ್ಕೂ ಹೆಚ್ಚು ಮತ್ತು ನೇಪಾಳ ಗಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸುಮಾರು 27 ಸಾವಿರ ಜನರ ಮೇಲೆ ಕಣ್ಗಾವಲಿರಿಸಲಾಗಿದೆ. ದೇಶದಾದ್ಯಂತ  ಈ ವರೆಗೂ 28 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 28 ಮಂದಿಯ ಪೈಕಿ ಮೂವರು ಕೇರಳ, ದೆಹಲಿ, ತೆಲಂಗಾಣದಲ್ಲಿ ಒಬ್ಬೊಬ್ಬರು, ಆಗ್ರಾದಲ್ಲಿ 6, ಇಟಲಿಯಿಂದ ಭಾರತ ಪ್ರವಾಸಕ್ಕೆ ಬಂದಿರುವ 17 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು  ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ತಿಳಿಸಿದ್ದಾರೆ. 

ವಿಶ್ವದಾದ್ಯಂತ ಸುಮಾರು 3, 100 ಜನರ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಸೋಂಕು ಹರಡದಂತೆ  ಸರ್ಕಾರ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT