ಪವನ್ ಗುಪ್ತಾ 
ದೇಶ

ನಿರ್ಭಯಾ ಕೇಸ್: ಗಲ್ಲು ಜಾರಿಗೆ ಇದ್ದ ಕಡೇಯ ಅಡ್ಡಿ ನಿವಾರಣೆ? ಪವನ್ ಗುಪ್ತಾ ಕ್ಷಮಾದಾನ ಅರ್ಜಿ ವಜಾ 

 2012 ರ ನಿರ್ಭಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕಡೇ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ತಿರಸ್ಕರಿಸಿದ್ದಾರೆ.ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆಗೀಡಾಗಿರುವ ನಾಲ್ವರಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದ ಕಡೇಯ ಅಪರಾಧಿಯಾಗಿದ್ದಾರೆ. ಇತರ ಮೂವರಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್, ಮುಖೇಶ್ ಸಿ

ನವದೆಹಲಿ:  2012 ರ ನಿರ್ಭಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕಡೇ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ತಿರಸ್ಕರಿಸಿದ್ದಾರೆ.ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆಗೀಡಾಗಿರುವ ನಾಲ್ವರಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದ ಕಡೇಯ ಅಪರಾಧಿಯಾಗಿದ್ದಾರೆ. ಇತರ ಮೂವರಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್, ಮುಖೇಶ್ ಸಿಂಗ್ ಅವರುಗಳ ಅರ್ಜಿಯನ್ನು ಈಗಾಗಲೇ ರಾಷ್ಟ್ರಪತಿಗಳು ವಜಾಗೊಳಿಸಿದ್ದಾರೆ.

ಬುಧವಾರ ನಡೆದ ಬೆಳವಣಿಗೆಯೊಡನೆ ನಾಲ್ವರು ಅಪರಾಧಿಗಳ ಎಲ್ಲಾ ಕಾನೂನು ರಹದಾರಿಗಳು ಅಂತ್ಯವಾಗಿದೆ. ಅಲ್ಲದೆ ಮುಂದಿನ ಹದಿನೈದು ದಿನಗಳಲ್ಲಿ ಅವರನ್ನು ಗಲ್ಲಿಗೇರಿಸುವ ಸಾಧ್ಯತೆ ಇದೆ. ಈ ಸಂಬಂಧ ನಾಲ್ವರ ವಿರುದ್ಧ ಹೊಸ ಡೆತ್ ವಾರಂಟ್ ಅನ್ನುದೆಹಲಿ ನ್ಯಾಯಾಲಯ ಹೊರಡಿಸಲಿದೆ

2014 ರ ಶತ್ರುಘ್ನಚೌಹಾಣ್ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳ ಪ್ರಕಾರ, ಅಪರಾಧಿಗಳಿಗೆ ತಮ್ಮ ವ್ಯವಹಾರಗಳನ್ನು ತೀರ್ಮಾನಿಸಲು ಮರಣದಂಡನೆಗೆ “ತಯಾರಿ” ಮಾಡಲು 14 ದಿನಗಳ ಕಾಲಾವಕಾಶ ನೀಡಬೇಕು.

ನಾಲ್ವರು ಆರೋಪಿಗಳನ್ನು ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಬೇಕಿತ್ತು. ಸೋಮವಾರ, ಅವರ ಮರಣದಂಡನೆಗೆ ಕೆಲವು ಗಂಟೆಗಳ ಮೊದಲು, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಗುಪ್ತಾ ಅವರು ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದಾಗ ಅವರ ಮರಣದಂಡನೆಯನ್ನು ತಡೆಹಿಡಿಯಲಾಯಿತು.

ಡಿಸೆಂಬರ್ 16-17, 2012 ರ ಮಧ್ಯರಾತ್ರಿಯಲ್ಲಿ ಚಲಿಸುವ ಬಸ್‌ನಲ್ಲಿ 23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯನ್ನು  ನಾಲ್ವರು ಅಪರಾಧಿಗಳು ಮತ್ತು ಇತರ ಇಬ್ಬರು ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದರು.ಸಂತ್ರಸ್ಥ ಯುವತಿ ಮುಂದಿನ ಕೆಲ ದಿನಗಳ ನಂತರ ನಿಧನಳಾಗಿದ್ದಳು. ಈ ಪ್ರಕರಣದ ಓರ್ವ ಆರೋಪಿ ರಾಮ್ ಸಿಂಗ್ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ನೆ. ಆರೋಪಿಗಳ ಪೈಕಿ ಒಬ್ಬ ಬಾಲಾಪರಾಧಿಯನ್ನು ಬಾಲಾಪರಾಧಿ ನ್ಯಾಯ ಮಂಡಳಿ ಶಿಕ್ಷೆಗೊಳಪಡಿಸಿದೆ. ಮೂರು ವರ್ಷಗಳ ಅವಧಿ ನಂತರ ಆತನನ್ನು ರಿಮ್ಯಾಂಡ್ ಹೋಂ ನಿಂದ ಬಿಡುಗಡೆ ಂಆಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT