ಹರೀಶ್ ಸಾಳ್ವೆ 
ದೇಶ

ಸಿಎಎ ಅವಶ್ಯಕವಾಗಿದೆ, ಮುಸ್ಲಿಮರನ್ನು ಭಾರತದಿಂದ ಹೊರಗೆ ಕಳುಹಿಸುವ ಉದ್ದೇಶ ಹೊಂದಿಲ್ಲ- ಹರೀಶ್ ಸಾಳ್ವೆ 

ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಿಎಎ ಅವಶ್ಯಕವಾಗಿದೆ, ಮುಸ್ಲಿಂರನ್ನು ಭಾರತದಿಂದ ಹೊರಗೆ ಕಳುಹಿಸುವ ಉದ್ದೇಶ ಹೊಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ನವದೆಹಲಿ:  ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಿಎಎ ಅವಶ್ಯಕವಾಗಿದೆ, ಮುಸ್ಲಿಂರನ್ನು ಭಾರತದಿಂದ ಹೊರಗೆ ಕಳುಹಿಸುವ ಉದ್ದೇಶ ಹೊಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಮಾನತೆ ಎಂದರೆ ಎಲ್ಲಾ ಕಾನೂನುಗಳು ಎಲ್ಲರಿಗೂ ಏಕರೂಪವಾಗಿರಬೇಕು ಎಂಬರ್ಥವಲ್ಲಾ,ಸಮಾನತೆಯ ತತ್ವವು ರಾಜ್ಯದಿಂದ ವರ್ಗೀಕರಣ ಮಾಡುವ ಶಕ್ತಿಯನ್ನು ಕಿತ್ತುಕೊಳ್ಳುವುದಕ್ಕೆ ಕಾರಣವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮುಸ್ಲಿಂರ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ವಿರುದ್ದ ಕಿಡಿಕಾರಿರುವ ಹರೀಶ್ ಸಾಳ್ವೆ,  ಅಪ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದಿರುವ ಅಲ್ಪಸಂಖ್ಯಾತರಿಗೆ ಪೌರತ್ವ ಕಲ್ಪಿಸಲು ಸಿಎಎ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ. 

ಸಿಎಎಯಿಂದ ಮುಸ್ಲಿಂರನ್ನು ಭಾರತದಿಂದ ಹೊರಗೆ ಕಳುಹಿಸುವ ಉದ್ದೇಶವನ್ನು ಸರ್ಕಾರ ಹೊಂದಿಲ್ಲ, ಧರ್ಮದ ಆಧಾರದ ಮೇಲೆ ವರ್ಗೀಕರಣವು ಅಸಂವಿಧಾನಿಕವಲ್ಲ, ಏಕೆಂದರೆ ಸಂವಿಧಾನವು ಭಾರತದಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯಗಳ ಸದಸ್ಯರಿಗೆ ವಿಶೇಷ ಹಕ್ಕುಗಳನ್ನು ನೀಡುತ್ತದೆ ಎಂದು ಹೇಳಿದ್ದಾರೆ. 

ದೇಶದ ಪೌರತ್ವವು ಪ್ರಸ್ತುತ ಬಹುತೇಕ ಎಲ್ಲ ದೇಶಗಳಲ್ಲಿ ಅನುಸರಿಸುತ್ತಿರುವ ಒಂದೇ ರೀತಿಯ ತತ್ವಗಳನ್ನು ಆಧರಿಸಿದೆ, ಇವುಗಳನ್ನು ಕಾನೂನಿನ ನಿಯಮದ ಮೂಲಕ ನಿಯಂತ್ರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT