ಹರೀಶ್ ಸಾಳ್ವೆ 
ದೇಶ

ಸಿಎಎ ಅವಶ್ಯಕವಾಗಿದೆ, ಮುಸ್ಲಿಮರನ್ನು ಭಾರತದಿಂದ ಹೊರಗೆ ಕಳುಹಿಸುವ ಉದ್ದೇಶ ಹೊಂದಿಲ್ಲ- ಹರೀಶ್ ಸಾಳ್ವೆ 

ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಿಎಎ ಅವಶ್ಯಕವಾಗಿದೆ, ಮುಸ್ಲಿಂರನ್ನು ಭಾರತದಿಂದ ಹೊರಗೆ ಕಳುಹಿಸುವ ಉದ್ದೇಶ ಹೊಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ನವದೆಹಲಿ:  ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಿಎಎ ಅವಶ್ಯಕವಾಗಿದೆ, ಮುಸ್ಲಿಂರನ್ನು ಭಾರತದಿಂದ ಹೊರಗೆ ಕಳುಹಿಸುವ ಉದ್ದೇಶ ಹೊಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಮಾನತೆ ಎಂದರೆ ಎಲ್ಲಾ ಕಾನೂನುಗಳು ಎಲ್ಲರಿಗೂ ಏಕರೂಪವಾಗಿರಬೇಕು ಎಂಬರ್ಥವಲ್ಲಾ,ಸಮಾನತೆಯ ತತ್ವವು ರಾಜ್ಯದಿಂದ ವರ್ಗೀಕರಣ ಮಾಡುವ ಶಕ್ತಿಯನ್ನು ಕಿತ್ತುಕೊಳ್ಳುವುದಕ್ಕೆ ಕಾರಣವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮುಸ್ಲಿಂರ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ವಿರುದ್ದ ಕಿಡಿಕಾರಿರುವ ಹರೀಶ್ ಸಾಳ್ವೆ,  ಅಪ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದಿರುವ ಅಲ್ಪಸಂಖ್ಯಾತರಿಗೆ ಪೌರತ್ವ ಕಲ್ಪಿಸಲು ಸಿಎಎ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ. 

ಸಿಎಎಯಿಂದ ಮುಸ್ಲಿಂರನ್ನು ಭಾರತದಿಂದ ಹೊರಗೆ ಕಳುಹಿಸುವ ಉದ್ದೇಶವನ್ನು ಸರ್ಕಾರ ಹೊಂದಿಲ್ಲ, ಧರ್ಮದ ಆಧಾರದ ಮೇಲೆ ವರ್ಗೀಕರಣವು ಅಸಂವಿಧಾನಿಕವಲ್ಲ, ಏಕೆಂದರೆ ಸಂವಿಧಾನವು ಭಾರತದಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯಗಳ ಸದಸ್ಯರಿಗೆ ವಿಶೇಷ ಹಕ್ಕುಗಳನ್ನು ನೀಡುತ್ತದೆ ಎಂದು ಹೇಳಿದ್ದಾರೆ. 

ದೇಶದ ಪೌರತ್ವವು ಪ್ರಸ್ತುತ ಬಹುತೇಕ ಎಲ್ಲ ದೇಶಗಳಲ್ಲಿ ಅನುಸರಿಸುತ್ತಿರುವ ಒಂದೇ ರೀತಿಯ ತತ್ವಗಳನ್ನು ಆಧರಿಸಿದೆ, ಇವುಗಳನ್ನು ಕಾನೂನಿನ ನಿಯಮದ ಮೂಲಕ ನಿಯಂತ್ರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT