ಪ್ರತ್ಯಕ್ಷ ಚಿತ್ರ 
ದೇಶ

ದೆಹಲಿ ಹಿಂಸಾಚಾರ: ಪೇದೆ ರತನ್ ಲಾಲ್ ಹತ್ಯೆ, ಡಿಸಿಪಿ, ಎಸಿಪಿ ಕೊಲ್ಲುವ ಯತ್ನದ ವಿಡಿಯೋ ಪೋಸ್ಟ್ ಮಾಡಿದ ಕಪಿಲ್ ಮಿಶ್ರಾ!

ಸಿಎಎ ಸಂಬಂಧ ನಡೆದ ಹಿಂಸಾಚಾರದಲ್ಲಿ ದೆಹಲಿಯ ಪೊಲೀಸ್ ಪೇದೆ ರತನ್ ಲಾಲ್ ಹತ್ಯೆಯಾಗಿದ್ದು ಡಿಸಿಪಿ ಮತ್ತು ಎಸಿಪಿಯ ಮೇಲೆ ಉದ್ರಿಕ್ತರು ಹತ್ಯೆ ಯತ್ನ ಮಾಡುತ್ತಿರುವ ವಿಡಿಯೋ ಇದೀಗ ಬಿಡುಗಡೆಯಾಗಿದೆ.

ನವದೆಹಲಿ: ಸಿಎಎ ಸಂಬಂಧ ನಡೆದ ಹಿಂಸಾಚಾರದಲ್ಲಿ ದೆಹಲಿಯ ಪೊಲೀಸ್ ಪೇದೆ ರತನ್ ಲಾಲ್ ಹತ್ಯೆಯಾಗಿದ್ದು ಡಿಸಿಪಿ ಮತ್ತು ಎಸಿಪಿಯ ಮೇಲೆ ಉದ್ರಿಕ್ತರು ಹತ್ಯೆ ಯತ್ನ ಮಾಡುತ್ತಿರುವ ವಿಡಿಯೋ ಇದೀಗ ಬಿಡುಗಡೆಯಾಗಿದೆ. 

ಪ್ರತಿಭಟನಾ ನಿರತರು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯುತ್ತಿರುವುದು ಅಲ್ಲದೆ ದೊಣ್ಣೆಗಳಿಂದ ಥಳಿಸಿದ್ದಾರೆ. ಈ ವೇಳೆ ಗಲಭೆಕೋರರಿಗೆ ಸಿಕ್ಕ ರತನ್ ಲಾಲ್ ಗಂಭೀರವಾಗಿ ಗಾಯಗೊಂಡು ಹುತಾತ್ಮರಾಗಿದ್ದಾರೆ. ಇದೇ ವೇಲೆ ಉದ್ರಿಕ್ತರ ತಂಡ ಡಿಸಿಪಿ ಅಮಿತ್ ಶರ್ಮಾ ಮತ್ತು ಎಸಿಪಿ ಅನೂಜ್ ಅವರ ಮೇಲೆ ದಾಳಿ ಮಾಡುತ್ತಿರುವ ದೃಶ್ಯಗಳು ಈ ವಿಡಿಯೋದಲ್ಲಿದೆ. 

ಬಿಜೆಪಿಯ ಮುಖಂಡ ಕಪಿಲ್ ಮಿಶ್ರಾ ಅವರು ಈ ವಿಡಿಯೋವನ್ನು ಟ್ವೀಟ್ ಮಾಡಿ, ಗಲಭೆಕೋರರನ್ನು ನಿಯಂತ್ರಿಸಲು ಬಂದ ಪೊಲೀಸರ ಗುಂಪನ್ನು ಸುತ್ತುವರೆದ ಮಹಿಳೆಯರು ಸೇರಿದಂತೆ ಉದ್ರಿಕ್ತರ ಗುಂಪು ಕಲ್ಲುಗಳನ್ನು ತೂರಿದ್ದಾರೆ. ಅಲ್ಲದೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಚಾಂದ್ ಭಾಗ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ ಎಂದು ಬರೆದಿದ್ದಾರೆ. 

ಫೆಬ್ರವರಿ 24ರಂದು ಸಿಎಎ ಪರ-ವಿರೋಧಿಗಳ ನಡುವೆ ಘರ್ಷಣೆ ನಡೆದಿತ್ತು. ನಂತರ ಭೀಕರ ಸ್ವರೂಪ ಪಡೆದ ಹಿಂಸಾಚಾರದಲ್ಲಿ ಬರೋಬ್ಬರಿ 48 ಮಂದಿ ಮೃತಪಟ್ಟಿದ್ದು 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. 92 ಗಂಟೆಗಳು ನಡೆದ ಹಿಂಸಾಚಾರದಲ್ಲಿ 92 ಮನೆಗಳು, 57 ಅಂಗಡಿ, 500 ವಾಹನಗಳು, 6 ಗೋಡಾನ್ ಗಳು, 2 ಶಾಲೆಗಳು, 4 ಫ್ಯಾಕ್ಟರಿಗಳು ಮತ್ತು 4 ಧಾರ್ಮಿಕ ಸ್ಥಳಗಳು ಬೆಂಕಿಗಾಹುತಿಯಾಗಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ