ನಿರ್ಭಯಾ ತಾಯಿ 
ದೇಶ

ಮಾರ್ಚ್ 20ಕ್ಕಾಗಿ ಎದುರು ನೋಡುತ್ತಿದ್ದೇನೆ: ನಿರ್ಭಯಾ ತಾಯಿ

ಮಾರ್ಚ್ 20 ನಮ್ಮ ಜೀವನದ ಅತ್ಯಂತ ಮಹತ್ವದ ದಿನವಾಗಲಿದ್ದು, ಅದಕ್ಕಾಗಿ ಎದುರು ನೋಡುತ್ತಿರುವುದಾಗಿ, ದೆಹಲಿ ಕೋರ್ಟ್ ನಿರ್ಭಯಾ ಹಂತಕರಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡಿದ ಬಳಿಕ ನಿರ್ಭಯಾ ತಾಯಿ ಆಶಾದೇವಿ ಅವರು ಹೇಳಿದ್ದಾರೆ.

ನವದೆಹಲಿ: ಮಾರ್ಚ್ 20 ನಮ್ಮ ಜೀವನದ ಅತ್ಯಂತ ಮಹತ್ವದ ದಿನವಾಗಲಿದ್ದು, ಅದಕ್ಕಾಗಿ ಎದುರು ನೋಡುತ್ತಿರುವುದಾಗಿ, ದೆಹಲಿ ಕೋರ್ಟ್ ನಿರ್ಭಯಾ ಹಂತಕರಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡಿದ ಬಳಿಕ ನಿರ್ಭಯಾ ತಾಯಿ ಆಶಾದೇವಿ ಅವರು ಹೇಳಿದ್ದಾರೆ.

ನಾಲ್ಕು ಕಾಮುಕರಿಗೆ ಮಾರ್ಚ್ 20ರಕ್ಕೆ ಹೊಸ ಡೆತ್ ವಾರೆಂಟ್ ಜಾರಿ ಮಾಡಿರುವ ದೆಹಲಿ ಕೋರ್ಟ್ ಕ್ರಮವನ್ನು ಸ್ವಾಗತಿಸಿರುವ ಆಶಾದೇವಿ, ನಾಲ್ವರೂ ಅಪರಾಧಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿರುವ ರಾಷ್ಟ್ರಪತಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಅಪರಾಧಿಗಳನ್ನು ನೇಣಿಗೆ ಹಾಕುವವರೆಗೆ ನಮ್ಮ ಹೋರಾಟ ನಡೆಯಲಿದೆ. ಮಾರ್ಚ್ 20ರಂದು ಅಪರಾಧಿಗಳನ್ನು ನೇಣಿಗೇರಿಸುವ ವಿಶ್ವಾಸವಿದೆ ಎಂದು ಆಶಾದೇವಿ ತಿಳಿಸಿದ್ದಾರೆ.

ತಮಗೆ ಕಾನೂನಿನ ಮೇಲೆ ಸಂಪೂರ್ಣ ಭರವಸೆಯಿದ್ದು, ಈ ಬಾರಿ ಜಾರಿ ಮಾಡಲಾಗಿರುವ ಡೆತ್ ವಾರೆಂಟ್ ಕೊನೆಯದ್ದು ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಅಲ್ಲದೇ ಹೊಸ ಡೆತ್ ವಾರೆಂಟ್ ಅನ್ವಯ ಮಾ.20ರಂದು ಗಲ್ಲುಶಿಕ್ಷೆ ಜಾರಿಯಾಗುವುದನ್ನು ತಾವು ಎದುರು ನೋಡುತ್ತಿರುವುದಾಗಿ ಆಶಾದೇವಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT