ಲೋಕಸಭೆಯಲ್ಲಿ ಗದ್ದಲ 
ದೇಶ

ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆ, ಕಲಾಪದ ವೇಳೆ ಗದ್ದಲ; 7 ಕಾಂಗ್ರೆಸ್​ ಸಂಸದರ ಅಮಾನತು

ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.

ನವದೆಹಲಿ: ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.

ಕಾಂಗ್ರೆಸ್ ನ ಸಂಸದರಾದ ಗೌರವ್​ ಗೊಗೊಯಿ, ಟಿ.ಎನ್​.ಪ್ರತಾಪನ್​, ಮಾಣಿಕಂ ಟಾಗೋರ್​, ಗುರ್ಜೀತ್​ ಸಿಂಗ್​ ಔಜಲಾ, ಬೆನ್ನಿ ಬೆಹಾನನ್, ರಾಜಮೋಹನ್ ಉನ್ನಿತಾನ್ ಮತ್ತು ಡೀನ್ ಕುರಿಯಾಕೋಸ್ ಅವರನ್ನು ಸ್ಪೀಕರ್ ಓಂ ಬಿರ್ಲಾ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಸತತ ಎಚ್ಚರಿಕೆ ಹೊರತಾಗಿಯೂ ಸದನದಲ್ಲಿ ಅಶಿಸ್ತಿನಿಂದ ವರ್ತನೆ ತೋರಿದ ಕಾರಣ 7 ಸಂಸದರನ್ನು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಇನ್ನು ಸಂಸದರ ಅಮಾನತು ಆದೇಶವನ್ನು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಪಾಸ್​ ಮಾಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!