ದೆಹಲಿ ಹಿಂಸಾಚಾರ 
ದೇಶ

ದೆಹಲಿ ಹಿಂಸಾಚಾರ: ಕೇಜ್ರಿವಾಲ್ ಸರ್ಕಾರ, ಪೊಲೀಸರಿಗೆ ಬಂಧಿತರ ಪಟ್ಟಿ ನೀಡಿ ಎಂದು ಕೋರ್ಟ್ ಆದೇಶ!

ದೆಹಲಿ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 53ಕ್ಕೆ ಏರಿಯಾಗಿದ್ದು ಇನ್ನು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಷ್ಟು ಮಂದಿಯನ್ನು ಬಂಧಿಸಿದ್ದೀರಿ ಅವರ ಪಟ್ಟಿ ನೀಡಿ ಎಂದು ಅರವಿಂದ್ ಕೇಜ್ರಿವಾಲ್ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ.

ನವದೆಹಲಿ: ದೆಹಲಿ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 53ಕ್ಕೆ ಏರಿಯಾಗಿದ್ದು ಇನ್ನು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಷ್ಟು ಮಂದಿಯನ್ನು ಬಂಧಿಸಿದ್ದೀರಿ ಅವರ ಪಟ್ಟಿ ನೀಡಿ ಎಂದು ಅರವಿಂದ್ ಕೇಜ್ರಿವಾಲ್ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ. 

ಸಿಪಿಐ(ಎಂ) ಮುಖಂಡ ಬ್ರಿಂದಾ ಕರಾಟ್ ದೆಹಲಿಯ ಈಶಾನ್ಯ ಭಾಗದಲ್ಲಿ ನಡೆದ ಹಿಂಸಾಚಾರದಲ್ಲಿ ಎಷ್ಟು ಮಂದಿಯನ್ನು ಬಂಧಿಸಿದ್ದಾರೆ ಎಂಬ ಮಾಹಿತಿಗಾಗಿ ಪಿಐಎಲ್ ಸಲ್ಲಿಸಿದ್ದರು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ಬಂಧಿತರ ಪಟ್ಟಿ ನೀಡುವಂತೆ ಕೇಜ್ರಿವಾಲ್ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಆದೇಶಿಸಿದ್ದಾರೆ.

ಫೆಬ್ರವರಿ 24ರಂದು ಸಿಎಎ ಪರ-ವಿರೋಧಿಗಳ ನಡುವೆ ಘರ್ಷಣೆ ನಡೆದಿತ್ತು. ನಂತರ ಭೀಕರ ಸ್ವರೂಪ ಪಡೆದ ಹಿಂಸಾಚಾರದಲ್ಲಿ ಬರೋಬ್ಬರಿ 48 ಮಂದಿ ಮೃತಪಟ್ಟಿದ್ದು 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. 92 ಗಂಟೆಗಳು ನಡೆದ ಹಿಂಸಾಚಾರದಲ್ಲಿ 92 ಮನೆಗಳು, 57 ಅಂಗಡಿ, 500 ವಾಹನಗಳು, 6 ಗೋಡಾನ್ ಗಳು, 2 ಶಾಲೆಗಳು, 4 ಫ್ಯಾಕ್ಟರಿಗಳು ಮತ್ತು 4 ಧಾರ್ಮಿಕ ಸ್ಥಳಗಳು ಬೆಂಕಿಗಾಹುತಿಯಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT