ದೇಶ

ಅಯೋಧ್ಯೆ ತೀರ್ಪು: ಸುಪ್ರೀಂ ಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಹಾಕಿದ ಪಿಎಫ್ಐ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಎಂಬ ಇಸ್ಲಾಮಿಕ್ ಸಂಘಟನೆ ಅಯೋಧ್ಯೆ ತೀರ್ಪಿಗೆ ಸಂಬಂಧಿಸಿ ಶುಕ್ರವಾರ ಸುಪ್ರೀಂ ಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದೆ.

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಎಂಬ ಇಸ್ಲಾಮಿಕ್ ಸಂಘಟನೆ ಅಯೋಧ್ಯೆ ತೀರ್ಪಿಗೆ ಸಂಬಂಧಿಸಿ ಶುಕ್ರವಾರ ಸುಪ್ರೀಂ ಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದೆ.


ಅಯೋಧ್ಯೆ ಭೂ ವಿವಾದ ಕೇಸಿನಲ್ಲಿ ಅದು ಮುಖ್ಯ ಕಕ್ಷಿದಾರನಲ್ಲದಿದ್ದರೂ ಕೂಡ ಕಳೆದ ವರ್ಷ ನವೆಂಬರ್ 9ರಂದು ಸುಪ್ರೀಂ ಕೋರ್ಟ್ ನ ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ನೀಡಿದ ತೀರ್ಪು ತಮ್ಮ ಹಕ್ಕಿಗೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಿದೆ.


ಅಯೋಧ್ಯೆ ಭೂ ವಿವಾದ ಕೇಸಿಗೆ ಸಂಬಂಧಪಟ್ಟಂತೆ ನೀಡಿರುವ ತೀರ್ಪಿಗೆ ತಡೆ ತಂದು ಮುಕ್ತ ಕೋರ್ಟ್ ನಲ್ಲಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದೆ.


ಹಿಂದೂ ಧರ್ಮೀಯರಿಗೆ ರಾಮ ಮಂದಿರ ನಿರ್ಮಾಣಕ್ಕೆ ನೀಡಲಾಗಿರುವ 2.77 ಎಕರೆ ಜಮೀನು ವಿವಾದದ ಕೇಂದ್ರಬಿಂದುವಾಗಿದೆ. 
ಪಿಎಫ್ಐ ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಎರಡನೇ ಸಂಘಟನೆಯಾಗಿದ್ದು ಮೊದಲನೆಯದಾಗಿ ಉತ್ತರ ಪ್ರದೇಶದ ಪೀಸ್ ಪಾರ್ಟಿ ಅರ್ಜಿ ಹಾಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT