ದೆಹಲಿ ಗಲಭೆ 
ದೇಶ

ದೆಹಲಿ ಗಲಭೆ: ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್, ಏಷ್ಯಾನೆಟ್ ಗೆ ಎರಡು ದಿನ ಪ್ರಸಾರ ನಿರ್ಬಂಧ

ಈಶಾನ್ಯ ದೆಹಲಿಯ ಕೋಮುಗಲಭೆಗೆ ಸಂಬಂಧಿಸಿದಂತೆ ಅನುಚಿತ ವರದಿ ಪ್ರಸಾರ ಮಾಡಿದ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್ ಹಾಗೂ ಏಷ್ಯಾನೆಟ್ ಗೆ ಎರಡು ದಿನ ಪ್ರಸಾರ ನಿರ್ಬಂಧ ವಿಧಿಸಲಾಗಿದೆ.

ನವದೆಹಲಿ: ಈಶಾನ್ಯ ದೆಹಲಿಯ ಕೋಮುಗಲಭೆಗೆ ಸಂಬಂಧಿಸಿದಂತೆ ಅನುಚಿತ ವರದಿ ಪ್ರಸಾರ ಮಾಡಿದ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್ ಹಾಗೂ ಏಷ್ಯಾನೆಟ್ ಗೆ ಎರಡು ದಿನ ಪ್ರಸಾರ ನಿರ್ಬಂಧ ವಿಧಿಸಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಯಾವುದೇ ಪ್ರಸಾರ ಮಾಡದಂತೆ ಮಲಯಾಳಂನ ಈ ಎರಡು ಸುದ್ದಿ ವಾಹಿನಿಗಳ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧ ವಿಧಿಸಿದೆ.

ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರವನ್ನು ತಪ್ಪಾಗಿ ವರದಿ ಮಾಡಿದೆ ಎಂಬ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಏಷ್ಯಾನೆಟ್ ನ್ಯೂಸ್ ಮತ್ತು ಮೀಡಿಯಾ ಒನ್ ಗೆ ಕೇಂದ್ರ ಸರ್ಕಾರ 48 ಗಂಟೆಗಳ ಪ್ರಸಾರ ನಿಷೇಧವನ್ನು ಹೇರಿದೆ.

ಈ ವಾಹಿನಿಗಳ ಪ್ರಸಾರ ನಿಷೇಧ ಶುಕ್ರವಾರ ರಾತ್ರಿ 7.30 ರಿಂದ ಜಾರಿಗೆ ಬಂದಿದ್ದು, ಮುಂದಿನ 48 ಗಂಟೆಗಳ ಕಾಲ ಯಾವುದೇ ಕಾರ್ಯಕ್ರಮ ಅಥವಾ ಸುದ್ದಿ ಪ್ರಸಾರ ಮಾಡದಂತೆ ಸೂಚಿಸಲಾಗಿದೆ. 

"ಧರ್ಮ ಅಥವಾ ಸಮುದಾಯಗಳ ಮೇಲಿನ ದಾಳಿಗಳನ್ನು ಪ್ರಸಾರ ಮಾಡುವುದು, ಕೋಮು ವರ್ತನೆಗಳನ್ನು ಉತ್ತೇಜಿಸುವುದು" ಮತ್ತು "ಹಿಂಸಾಚಾರವನ್ನು ಪ್ರಚೋದಿಸುವುದು, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗೆ ವಿರುದ್ಧವಾಗಿ ಮತ್ತು ರಾಷ್ಟ್ರ ವಿರೋಧಿ ವರ್ತನೆಗಳನ್ನು ಉತ್ತೇಜಿಸುವುದನ್ನು" ನಿಷೇಧಿಸುವ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ನಿಯಮಗಳನ್ನು ಉಲ್ಲಂಘಿಸುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT