ದೆಹಲಿ ಗಲಭೆ 
ದೇಶ

ದೆಹಲಿ ಗಲಭೆ: ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್, ಏಷ್ಯಾನೆಟ್ ಗೆ ಎರಡು ದಿನ ಪ್ರಸಾರ ನಿರ್ಬಂಧ

ಈಶಾನ್ಯ ದೆಹಲಿಯ ಕೋಮುಗಲಭೆಗೆ ಸಂಬಂಧಿಸಿದಂತೆ ಅನುಚಿತ ವರದಿ ಪ್ರಸಾರ ಮಾಡಿದ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್ ಹಾಗೂ ಏಷ್ಯಾನೆಟ್ ಗೆ ಎರಡು ದಿನ ಪ್ರಸಾರ ನಿರ್ಬಂಧ ವಿಧಿಸಲಾಗಿದೆ.

ನವದೆಹಲಿ: ಈಶಾನ್ಯ ದೆಹಲಿಯ ಕೋಮುಗಲಭೆಗೆ ಸಂಬಂಧಿಸಿದಂತೆ ಅನುಚಿತ ವರದಿ ಪ್ರಸಾರ ಮಾಡಿದ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್ ಹಾಗೂ ಏಷ್ಯಾನೆಟ್ ಗೆ ಎರಡು ದಿನ ಪ್ರಸಾರ ನಿರ್ಬಂಧ ವಿಧಿಸಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಯಾವುದೇ ಪ್ರಸಾರ ಮಾಡದಂತೆ ಮಲಯಾಳಂನ ಈ ಎರಡು ಸುದ್ದಿ ವಾಹಿನಿಗಳ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧ ವಿಧಿಸಿದೆ.

ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರವನ್ನು ತಪ್ಪಾಗಿ ವರದಿ ಮಾಡಿದೆ ಎಂಬ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಏಷ್ಯಾನೆಟ್ ನ್ಯೂಸ್ ಮತ್ತು ಮೀಡಿಯಾ ಒನ್ ಗೆ ಕೇಂದ್ರ ಸರ್ಕಾರ 48 ಗಂಟೆಗಳ ಪ್ರಸಾರ ನಿಷೇಧವನ್ನು ಹೇರಿದೆ.

ಈ ವಾಹಿನಿಗಳ ಪ್ರಸಾರ ನಿಷೇಧ ಶುಕ್ರವಾರ ರಾತ್ರಿ 7.30 ರಿಂದ ಜಾರಿಗೆ ಬಂದಿದ್ದು, ಮುಂದಿನ 48 ಗಂಟೆಗಳ ಕಾಲ ಯಾವುದೇ ಕಾರ್ಯಕ್ರಮ ಅಥವಾ ಸುದ್ದಿ ಪ್ರಸಾರ ಮಾಡದಂತೆ ಸೂಚಿಸಲಾಗಿದೆ. 

"ಧರ್ಮ ಅಥವಾ ಸಮುದಾಯಗಳ ಮೇಲಿನ ದಾಳಿಗಳನ್ನು ಪ್ರಸಾರ ಮಾಡುವುದು, ಕೋಮು ವರ್ತನೆಗಳನ್ನು ಉತ್ತೇಜಿಸುವುದು" ಮತ್ತು "ಹಿಂಸಾಚಾರವನ್ನು ಪ್ರಚೋದಿಸುವುದು, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗೆ ವಿರುದ್ಧವಾಗಿ ಮತ್ತು ರಾಷ್ಟ್ರ ವಿರೋಧಿ ವರ್ತನೆಗಳನ್ನು ಉತ್ತೇಜಿಸುವುದನ್ನು" ನಿಷೇಧಿಸುವ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ನಿಯಮಗಳನ್ನು ಉಲ್ಲಂಘಿಸುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT