ಸಂಗ್ರಹ ಚಿತ್ರ 
ದೇಶ

ನಿರ್ಭಯಾ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಪರಾಧಿ ಮುಕೇಶ್

ಇದೇ 20 ರಂದು ನಿರ್ಭಯಾ ಅಪರಾಧಿಗಳಿಗೆ ಡೆತ್ ವಾರಂಟ್ ವಿಧಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ಪ್ರಕರಣದ ಆರೋಪಿ ಮುಕೇಶ್ ಮತ್ತೊಮ್ಮೆ ಸುಪ್ರೀಂಕೊರ್ಟ್ ಮೆಟ್ಟಿಲೇರಿದ್ದಾನೆ.

ನವದೆಹಲಿ: ಇದೇ 20 ರಂದು ನಿರ್ಭಯಾ ಅಪರಾಧಿಗಳಿಗೆ ಡೆತ್ ವಾರಂಟ್ ವಿಧಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ಪ್ರಕರಣದ ಆರೋಪಿ ಮುಕೇಶ್ ಮತ್ತೊಮ್ಮೆ ಸುಪ್ರೀಂಕೊರ್ಟ್ ಮೆಟ್ಟಿಲೇರಿದ್ದಾನೆ.
  
ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಪಟಿಯಾಲ ಹೌಸ್ ನ್ಯಾಯಾಲಯ ನೀಡಿದ ಹೊಸ ಡೆತ್ ವಾರಂಟ್ ಆದೇಶ ಹೊರಬಿದ್ದ ಬಳಿಕ, ಗಲ್ಲುಶಿಕ್ಷೆಯನ್ನು ಜೀವಾವಧಿಗೆ ಬದಲಿಸುವಂತೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ.  ಜತೆಗೆ ಕ್ಷಮಾದಾನ ಕೋರಿ ಮತ್ತೊಮ್ಮೆ ರಾಷ್ಟ್ರಪತಿಯವರಿಗೆ ಮನವಿ ಮಾಡಿದ್ದಾನೆ.

ದೆಹಲಿಯಲ್ಲಿ 2012 ಡಿಸೆಂಬರ್ 16ರಂದು ನಡೆದ ವೈದ್ಯಕೀಯೇತರ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತ, ವಿನಯ್ ಕುಮಾರ್ ಶರ್ಮಾ(26), ಅಕ್ಷಯ್ ಸಿಂಗ್ (31) ಅವರನ್ಹು ಇದೇ 20ರಂದು ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸುವಂತೆ ಪಟಿಯಾಲಾ ಹೌಸ್ ನ್ಯಾಯಾಲಯ ಆದೇಶಿಸಿದೆ.

ತನ್ನ ಪರ ವಾದ ಮಂಡಿಸಿದ ಆ್ಯಮಿಕಸ್ ಕ್ಯೂರಿ ವಿರುದ್ಧವೇ ಆರೋಪ
ಇನ್ನು ಅರ್ಜಿ ಸಲ್ಲಿಕೆ ವೇಳೆ ಅಪರಾಧಿ ಮುಕೇಶ್ ಈ ಹಿಂದೆ ತನ್ನ ಪರವಾದ ಮಂಡಿಸಿದ್ದ ಆ್ಯಮಿಕಸ್ ಕ್ಯೂರಿ ವೃಂದಾ ಗ್ರೋವರ್ ಅವರೇ ಬಲವಂತವಾಗಿ ಕ್ಯುರೇಟಿವ್ ಮತ್ತು ಕ್ಷಮಾದಾನ ಅರ್ಜಿ ಮೇಲೆ ನನ್ನ ಸಹಿ ಪಡೆದಿದ್ದರು. ಅಲ್ಲದೆ ಈ ಬಗ್ಗೆ ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ್ದರು ಎಂದು ಆರೋಪಿಸಿದ್ದಾನೆ. ಅಲ್ಲದೆ ತನ್ನ ಹಕ್ಕನ್ನು ತನಗೆ ನೀಡಿ ತನಗೆ ನೀಡಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಬದಲಿಸಲು ಅವಕಾಶ ನೀಡಬೇಕು ಎಂದು ಕೇಳಿದ್ದಾನೆ.

ಪುನರ್ ಪರಿಶೀಲನಾ ಅರ್ಜಿ ವಜಾಗೊಂಡ ಬಳಿಕ ದಿನದಿಂದ ಮೂರು ವರ್ಷಗಳು ಅಂದರೆ ಜುಲೈ 2021ರವರೆಗೂ ತನಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಈ ಕುರಿತ ತನ್ನ ಹಕ್ಕನ್ನು ನೀಡಬೇಕು ಎಂದು ಮುಕೇಶ್ ಅರ್ಜಿಯಲ್ಲಿ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. 

ಒಟ್ಟಾರೆ ನಿರ್ಭಯಾ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕಾನೂನಿನಲ್ಲಿರುವ ಸಣ್ಣಸಣ್ಣ ಅವಕಾಶವನ್ನೂ ಕೂಡ ಹೆಕ್ಕಿತೆಗೆದು ಅರ್ಜಿಗಳ ಮೇಲೆ ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದು, ಅಪರಾಧಿಗಳ ಈ ಆಟ ನೋಡುತ್ತಿರುವ ಸರ್ವೋಚ್ಛ ನ್ಯಾಯಾಲಯ ಮುಂದಿನ ದಿನಗಳಲ್ಲಿ ಎಂತಹ ನಡೆ ಅನುಸರಿಸುತ್ತದೆ ಎಂಬುದು ಕುತೂಹಲಕಾರಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT