ಸಾಂದರ್ಭಿಕ ಚಿತ್ರ 
ದೇಶ

ಕುಡಿತಕ್ಕೆ ಹಣ ನೀಡದ ಪತ್ನಿ: ಮೂವರು ಪುತ್ರಿಯರನ್ನು ಕೆರೆಗೆ ತಳ್ಳಿ ಹತ್ಯೆಗೈದ ಕಟುಕ ತಂದೆ

ಕುಡಿತಕ್ಕೆ ಹಣ ನೀಡದ ಪತ್ನಿಯೊಂದಿಗೆ ಜಗಳ ಮಾಡಿಕೊಂಡ 32 ವರ್ಷದ ಕುಡುಕ ವ್ಯಕ್ತಿಯೊಬ್ಬ 7ರಿಂದ 10 ವರ್ಷದೊಳಗೆ ತನ್ನ ಮೂವರು ಪುತ್ರಿಯರನ್ನು ಕೆರೆಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಕಾಮರೆಡ್ಡಿ ಜಿಲ್ಲೆಯಲ್ಲಿ ಇಂದು ನಡೆದಿದೆ.

ಹೈದ್ರಾಬಾದ್: ಕುಡಿತಕ್ಕೆ ಹಣ ನೀಡದ ಪತ್ನಿಯೊಂದಿಗೆ ಜಗಳ ಮಾಡಿಕೊಂಡ 32 ವರ್ಷದ ಕುಡುಕ ವ್ಯಕ್ತಿಯೊಬ್ಬ 7ರಿಂದ 10 ವರ್ಷದೊಳಗೆ ತನ್ನ ಮೂವರು ಪುತ್ರಿಯರನ್ನು ಕೆರೆಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಕಾಮರೆಡ್ಡಿ ಜಿಲ್ಲೆಯಲ್ಲಿ ಇಂದು ನಡೆದಿದೆ.

ಕೆರೆಯೊಂದರ ಹತ್ತಿರ ತನ್ನ ಮೂವರು ಪುತ್ರಿಯರನ್ನು ಕರೆದುಕೊಂಡು ಹೋದ ಕೂಲಿ ಕಾರ್ಮಿಕ, ಅದರಲ್ಲಿ ಅವರನ್ನು ತಳ್ಳಿ ನಂತರ ಅಲ್ಲಿಂದ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದ್ಯಕ್ಕಾಗಿ ಹಣ ನೀಡುವಂತೆ ಪತ್ನಿಯೊಂದಿಗೆ ಪ್ರತಿನಿತ್ಯ ಜಗಳವಾಡುತ್ತಿದ್ದ ಆತ ಜಗಳವಾಡುತ್ತಿದ್ದ ಎನ್ನಲಾಗಿದೆ. ಇಂದು ಬೆಳಗ್ಗೆ ಮನೆಯಲ್ಲಿ ಮೂವರು ಪುತ್ರಿಯರನ್ನು ಇರದಿದ್ದನ್ನು ಕಂಡ ತಾಯಿ,  ಕೆರೆ ಬಳಿ ಹುಡುಕಾಟ ನಡೆಸಿದಾಗ ಕೆರೆ ಬಳಿ ತನ್ನ ಪುತ್ರಿಯೊಬ್ಬಳ ಚಪ್ಪಲಿಯನ್ನು ಗುರುತಿಸಿದ್ದಾರೆ. ನಂತರ ಸ್ಥಳೀಯ ಜನರು ನೆರವಿನೊಂದಿಗೆ ತೀವ್ರ ಹುಡುಕಾಟ ನಡೆಸಿದಾಗ ಮೂವರು ಪುತ್ರಿಯರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಈ ಸಂಬಂಧ ತನಿಖೆ ಕೈಗೊಳ್ಳಲಾಗಿದ್ದು, ಆರೋಪಿಯ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ; ಜು.2 ರಂದು ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ಗಡಿ ವಿವಾದ ಬಗೆಹರಿಸಲು ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆಗೆ ಸಿದ್ಧ- ನೇಪಾಳ ವಿದೇಶಾಂಗ ಸಚಿವ ಖನಾಲ್

ಬಿಜೆಪಿಗೆ ಬೆಂಬಲ ಅಥವಾ ಕಾಂಗ್ರೆಸ್ ಜತೆ ಎನ್‌ಸಿಪಿ(ಎಸ್‌ಪಿ) ವಿಲೀನ ಕುರಿತು ಶರದ್ ಪವಾರ್ ಚರ್ಚೆ; ಸುಪ್ರಿಯಾ ಸುಳೆಗೆ ಮಹತ್ವದ ಹುದ್ದೆ?

ಕನ್ನಡ ಚಿತ್ರರಂಗದ ಉಳಿವಿಗಾಗಿ ‘ಸರ್ಕಾರಿ OTT ಆರಂಭಿಸಿ’: CM ಶಿವಕುಮಾರ್ ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಮನವಿ

ಭಾರತ - ಪಾಕಿಸ್ತಾನದ 100ಕ್ಕೂ ಹೆಚ್ಚು ರಾಜಕಾರಣಿಗಳು, ಮಾಜಿ ರಾಜತಾಂತ್ರಿಕರಿಂದ ಮೋದಿ, ಷರೀಫ್‌ಗೆ ಪತ್ರ; ಇಲ್ಲಿದೆ ಕಾರಣ...