ಬಾಬ್ರಿ ಮಸೀದಿ 
ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ಸಿಬಿಐ ವಿಶೇಷ ಕೋರ್ಟ್ ನಿಂದ ತ್ವರಿತಗತಿಯ ವಿಚಾರಣೆ

ರಾಮಜನ್ಮ ಭೂಮಿ ನಿವೇಶನ ವಿವಾದವನ್ನು ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್ ಆಯೋಧ್ಯೆ ರಾಮ ಮಂದಿರ ಪರವಾಗಿ ತೀರ್ಪು ಪ್ರಕಟಿಸಿದ ನಂತರ, ಈಗ ಎಲ್ಲರ ಕಣ್ಣು ಬಾಬ್ರಿ ಮಸೀದಿ ದ್ವಂಸ ಪ್ರಕರಣ ಸಂಬಂಧ ತ್ವರಿತ  ವಿಚಾರಣೆಯ ಮೇಲೆ ನೆಟ್ಟಿದೆ.

ಲಕ್ನೋ: ರಾಮಜನ್ಮ ಭೂಮಿ ನಿವೇಶನ ವಿವಾದವನ್ನು ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್ ಆಯೋಧ್ಯೆ ರಾಮ ಮಂದಿರ ಪರವಾಗಿ ತೀರ್ಪು ಪ್ರಕಟಿಸಿದ ನಂತರ, ಈಗ ಎಲ್ಲರ ಕಣ್ಣು ಬಾಬ್ರಿ ಮಸೀದಿ ದ್ವಂಸ ಪ್ರಕರಣ ಸಂಬಂಧ ತ್ವರಿತ ವಿಚಾರಣೆಯ ಮೇಲೆ ನೆಟ್ಟಿದೆ.

ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆಯ ನಂತರ  ಪ್ರಕರಣವನ್ನು ಸಿಬಿಐ ವಿಶೇಷ  ನ್ಯಾಯಾಲಯ ಕೈಗೆತ್ತಿಕೊಂಡಿದ್ದು, ಪ್ರಕರಣದ 294ನೇ ಸಾಕ್ಷಿಯಾಗಿರುವ ಎಂ. ನಾರಾಯಣನ್ ಶುಕ್ರವಾರ ಹೇಳಿಕೆ ದಾಖಲಿಸಲು ನ್ಯಾಯಾಲಯದ ಮುಂದೆ ಹಾಜರಾಗಿದ್ದರು.

ಈ ಪ್ರಕರಣದಲ್ಲಿ ಸಿಬಿಐ ಪರವಾಗಿ ನಾರಾಯಣನ್ ಕೊನೆಯ ಸಾಕ್ಷಿಯಾಗಿದ್ದಾರೆ. ಈ ಪ್ರಕರಣವನ್ನು 1992, ಡಿಸೆಂಬರ್6, ರಂದು ರಾಮಜನ್ಮಭೂಮಿ ಪೊಲೀಸ್ ಠಾಣೆಯ ಠಾಣಾಧಿಕಾರಿ, ರಾಮಜನ್ಮಭೂಮಿ ಚೌಕಿ ಉಸ್ತುವಾರಿ  ದಾಖಲಿಸಿದ್ದರು.

ಸಿ ಆರ್ ಪಿ ಸಿ ಸೆಕ್ಷನ್ 313ರಡಿ 33 ಆರೋಪಿಗಳ ಹೇಳಿಕೆಯನ್ನು ವಿಶೇಷ ಸಿಬಿಐ ನ್ಯಾಯಧೀಶ  ಎಸ್.ಕೆ.ಯಾದವ್   ದಾಖಲಿಸಿಕೊಳ್ಳುವುದನ್ನು  ಆರಂಭಿಸಿದ್ದಾರೆ.

ಮಸೀದಿ ದ್ವಂಸ ಸಂಬಂಧ  ದಾಖಲಾಗಿದ್ದ ಒಟ್ಟು 48ಎಫ್ ಐ ಆರ್ ಗಳ ಬಗ್ಗೆ ತನಿಖೆ ನಡೆಸಿದ ಸಿಬಿ- ಸಿಐಡಿ ನಂತರ ಅದನ್ನು ಸಿಬಿಐಗೆ ಹಸ್ತಾಂತರಿಸಿತ್ತು. ನಂತರ  ಮೇ 31, 2017ರ  ಮೇ ತಿಂಗಳಲ್ಲಿ ಸಿಬಿಐ 49 ಮಂದಿಯ ವಿರುದ್ದ  ದೋಷಾರೋಪಪಟ್ಟಿ ಸಲ್ಲಿಸಿತ್ತು ಈ ಪೈಕಿ 16 ಮಂದಿ ಮೃತಪಟ್ಟಿದ್ದಾರೆ. ಪ್ರಕರಣದ  ತೀರ್ಪನ್ನು ಒಂಬತ್ತು ತಿಂಗಳೊಳಗೆ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ತಾಕೀತು  ಮಾಡಿರುವ ಹಿನ್ನಲೆಯಲ್ಲಿ ನ್ಯಾಯಾಲಯ 2020ರ ಅಂತ್ಯದ ವೇಳೆಗೆ ತೀರ್ಪು ಪ್ರಕಟಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT