ನವದೆಹಲಿ: ಚೀನಾ ಬಳಿಕ ಇಡೀ ವಿಶ್ವಕ್ಕೆ ಕೊರೋನಾ ವೈರಸ್ ಕಂಟಕವಾಗಿ ಪರಿಣಮಿಸಿದ್ದು, ವೈರಾಣುವಿನ ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ರುಸೆಲ್ಸ್ ಪ್ರವಾಸವನ್ನು ರದ್ದು ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಕೊರೋನಾ ವೈರಸ್ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಷ್ಟ್ರಗಳೂ ಪ್ರವಾಸಗಳನ್ನು ಕೈಗೊಳ್ಳದಂತೆ ನಿರ್ಧಾರ ಕೈಗೊಂಡಿವೆ. ಹೀಗಾಗಿ ಮೋದಿಯವರ ಬ್ರುಸೆಲ್ಸ್ ಪ್ರವಾಸವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ, ಅಲ್ಲದೆ, ಭಾರತ-ಐರೋಪ್ಯ ಒಕ್ಕೂಟ ಶೃಂಗದ ದಿನಾಂಕವನ್ನು ಬದಲಿಸಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿದ್ದು ಈ ಸೋಂಕಿಗೆ ಹಲವರು ಬಲಿಯಾಗುತ್ತಿದ್ದಾರೆ.