ರಾಣಾ ಕಪೂರ್ 
ದೇಶ

ಯೆಸ್ ಬ್ಯಾಂಕ್ ಹಗರಣ: ರಾಣಾ ಕಪೂರ್, ಡಿಹೆಚ್ಎಫ್ಎಲ್, ಡುಇಟ್ ಅರ್ಬನ್ ವೆಂಚರ್ಸ್ ವಿರುದ್ಧ ಎಫ್ಐಆರ್ ದಾಖಲು

ಯೆಸ್ ಬ್ಯಾಂಕ್ ಹಗರಣ ಪ್ರಕರಣ ಸಂಬಂಧ ಬ್ಯಾಂಕ್'ನ ಸಂಸ್ಥಾಪಕ ಹಾಗೂ ಮಾಜಿ ವ್ಯವಸ್ಥಾಪಕ ನಿರ್ದೇಶಕ ರಾಣಾ ಕಪೂರ್, ಡಿಹೆಚ್ಎಫ್ಎಲ್, ಡುಇಟ್ ಅರ್ಬನ್ ವೆಂಚರ್ಸ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎಫ್ಐಆರ್ ದಾಖಲಿಸಿಕೊಂಡಿದೆ. 

ನವದೆಹಲಿ: ಯೆಸ್ ಬ್ಯಾಂಕ್ ಹಗರಣ ಪ್ರಕರಣ ಸಂಬಂಧ ಬ್ಯಾಂಕ್'ನ ಸಂಸ್ಥಾಪಕ ಹಾಗೂ ಮಾಜಿ ವ್ಯವಸ್ಥಾಪಕ ನಿರ್ದೇಶಕ ರಾಣಾ ಕಪೂರ್, ಡಿಹೆಚ್ಎಫ್ಎಲ್, ಡುಇಟ್ ಅರ್ಬನ್ ವೆಂಚರ್ಸ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎಫ್ಐಆರ್ ದಾಖಲಿಸಿಕೊಂಡಿದೆ. 

ರಾಣಾ ಕಪೂರ್ ಮತ್ತು ಡಿಹೆಚ್ಎಫ್ಎಲ್, ಡುಇಟ್ ಅರ್ಬನ್ ವೆಂಚರ್ಸ್ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಸಂಚು, ವಂಚನೆ ಮತ್ತು ಭ್ರಷ್ಟಾಚಾರದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 

ರಾಣಾ ಕಪೂರ್, ತಮ್ಮ ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ ಡುಇಟ್ ಅರ್ಬನ್ ವೆಂಚರ್ಸ್ ಎಂಬ ಕಂಪನಿ ಸ್ಥಾಪಿಸಿದ್ದರು. ಈ ಕಂಪನಿಗೆ ಡಿಹೆಚ್ಎಫ್ಎಲ್ ರೂ.600 ಕೋಟಿ ಸಾಲ ನೀಡಿತ್ತು. ಈ ಹಣವು ಡಿಹೆಚ್ಎಫ್ಎಲ್'ಗೆ ಯೆಸ್ ಬ್ಯಾಂಕ್ ನೀಡಿದ್ದ ರೂ.3000 ಕೋಟಿ ಸಾಲಕ್ಕೆ ಪ್ರತಿಯಾಗಿ ನೀಡಿದ ಲಂಚ ಹಣ ಎಂಬ ಗುಮಾನಿ ಸಿಬಿಐನದ್ದು. ಹೀಗಾಗಿಯೇ ಎಲ್ಲರ ವಿರುದ್ಧವೂ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. 

ಈ ನಡುವೆ ಹಗರಣದಲ್ಲಿ ಭಾಗಿಯಾಗಿರುವ ಶಂಕೆ ಎದುರಿಸುತ್ತಿರುವ ರಾಣಾ ಕಪೂರ್ ಅವರ ಪುತ್ರ ರೋಶನಿ, ಭಾನುವಾರ ಮುಂಬೈನಿಂದ ಲಂಡನ್'ಗೆ ತೆರಳಲು ಯತ್ನಿಸುತ್ತಿದ್ದ ವೇಳೆ, ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ಯೆಸ್ ಬ್ಯಾಂಕ್ ಹಗರಣದ ಹಿನ್ನೆಲೆಯಲ್ಲಿ ರಾಣಾ ಕಪೂರ್, ಅವರ ಪತ್ನಿ ಮತ್ತು ಮೂವರು ಪುತ್ರಿಯರಿಗೆ ದೇಶ ಬಿಡದಂತೆ ಸೂಚಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT