ಸಂಗ್ರಹ ಚಿತ್ರd 
ದೇಶ

ಕೊರೋನಾ ವೈರಸ್ ಕುರಿತು ಅರಿವು ಮೂಡಿಸಲು ಕಾಲರ್ ಟ್ಯೂನ್ ಬಳಕೆ

ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಭೀತಿಯನ್ನು ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ವೈರಸ್ ಕುರಿತು ಅರಿವು ಮೂಡಿಸುವ ಸಲುವಾಗಿ ರಿಂಗ್ ಟೋನ್ ಬದಲಿಗೆ ಕೊರೋನಾ ಜಾಗೃತಿ ಕುರಿತ ಸಂದೇಶಗಳನ್ನು ಕಾಲ್ ಟ್ಯೂನ್ ಆಗಿ ಹಾಕುವಂತೆ ಟಲಿಕಾಂ ಇಲಾಖೆ (ಡಿಒಟಿ) ಟೆಲಿಕಾಂ ಆಪರೇಟರ್ ಗಳಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ. 

ನವದೆಹಲಿ: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಭೀತಿಯನ್ನು ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ವೈರಸ್ ಕುರಿತು ಅರಿವು ಮೂಡಿಸುವ ಸಲುವಾಗಿ ರಿಂಗ್ ಟೋನ್ ಬದಲಿಗೆ ಕೊರೋನಾ ಜಾಗೃತಿ ಕುರಿತ ಸಂದೇಶಗಳನ್ನು ಕಾಲ್ ಟ್ಯೂನ್ ಆಗಿ ಹಾಕುವಂತೆ ಟಲಿಕಾಂ ಇಲಾಖೆ (ಡಿಒಟಿ) ಟೆಲಿಕಾಂ ಆಪರೇಟರ್ ಗಳಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ. 

ಈ ಸೂಚನಯನ್ನು ಈಗಾಗಲೇ ಬಿಎಸ್ಎನ್ಎಲ್, ಜಿಯೋ ಮತ್ತು ಏರ್ಟೆಲ್ ಸಂಸ್ಥೆಗಳು ಅನುಸರಿಸುತ್ತಿದ್ದು, ತಮ್ಮ ಗ್ರಾಹಕರಿಗೆ ಜಾಗೃತಿ ಮೂಡಿಸಲು ಈಗಾಗಲೇ ಟ್ಯೂನ್ ಬಳಕೆ ಮಾಡುತ್ತಿದೆ. ಆದರೆ, ಒಂದು ವೇಳೆ ಬಳಕೆದಾರರು ಈಗಾಗಲೇ ಕಾಲರ್ ಟ್ಯೂನ್ ನ್ನು ಪ್ರತ್ಯೇಕವಾಗಿ ಹಾಕಿಸಿಕೊಂಡು ಚಂದಾದಾರರಾಗಿದ್ದರೆ, ಈ ಸಂದೇಶ ಅಪ್ಲೈ ಆಗುವುದಿಲ್ಲ ಎನ್ನಲಾಗುತ್ತಿದೆ. 

ವೈರಸ್ ಹರಡದಂತೆ ನೋಡಿಕೊಳ್ಳಲು ಏನನ್ನು ಮಾಡಬಹುದು ಎಂಬುದನ್ನು ಕಾಲರ್ ಟ್ಯೂನ್ ಸಂದೇಶ ನೀಡಲಿಗೆ. ಕೆಮ್ಮುವಾಗ ಅಥವಾ ಸೀನುವಾರ ನಿಮ್ಮ ಮುಖವನ್ನು ಕರವಸ್ತ್ರ ಅಥವಾ ಟಿಶ್ಯುವಿನಿಂದ ಮುಚ್ಚಿಕೊಳ್ಳಿ. ನಿಯಮಿತವಾಗಿ ಕೈಗಳನ್ನು ಸೋಪಿನಿಂದ ಸ್ವಚ್ಛಗೊಳಿಸಿ ಎಂದು ಸಂದೇಶದಲ್ಲಿ ಹೇಳುತ್ತದೆ. ದೇಶದ ಜನತೆಯಲ್ಲಿ ಜಾಗೃತಿ ಮೂಡಿಸಲು ಈ ಸಂದೇಶವನ್ನು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ತಿಳಿಸಲಾಗುತ್ತಿದೆ. 

ನಿಮ್ಮ ಮುಖ, ಕಣ್ಣು ಅಥವಾ ಮೂಗನ್ನು ಸ್ಪರ್ಶಿಸುವುದನ್ನು ತಪ್ಪಿಸಿ. ಯಾರಿಗಾದರೂ ಕೆಮ್ಮು,ಜ್ವರ ಅಥವಾ ಉಸಿರಾಟಕ ಸಮಸ್ಯೆಯಿದೆ ಎಂಬುದು ತಿಳಿದುಬಂದಿದ್ದೇ ಆದರೆ, ಅವರಿಂದ 1 ಮೀಟರ್ ಅಂತರವನ್ನು ಕಾಪಾಡಿಕೊಳ್ಳಿ. ಅಗತ್ಯವಿದ್ದರೆ, ಕೂಡಲೇ ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ. ಸಹಾಯವಾಣಿ ಸಂಖ್ಯೆ +91 -11-23797-8046 ಸಂಪರ್ಕಿಸಿ ಎಂದು ಹೇಳುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT