ಹತ್ಯೆಯಾದ ಪ್ರಣಯ್ ಪತ್ನಿಯೊಂದಿಗಿರುವ ಚಿತ್ರ (ಸಂಗ್ರಹ ಚಿತ್ರ) 
ದೇಶ

ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣ: ಅಳಿಯನ ಕೊಲೆ ಮಾಡಿಸಿದ್ದ ಉದ್ಯಮಿ ರಾವ್ ಆತ್ಮಹತ್ಯೆಗೆ ಶರಣು

ತನ್ನ ಮಗಳನ್ನು ಮದುವೆ ಆಗಿದ್ದ ದಲಿತ ವ್ಯಕ್ತಿಯನ್ನು ಮರ್ಯಾದಾ ಹತ್ಯೆ ಮಾಡಿಸಿದ್ದ ಆರೋಪ ಹೊತ್ತಿದ್ದ ತೆಲಂಗಾಣದ ರಿಯಲ್ ಎಸ್ಟೇಟ್ ಉದ್ಯಮಿ ಮಾರುತಿ ರಾವ್, ತಮ್ಮ ತಪ್ಪಿಗೆ ಕ್ಷಮೆಯಾಚಿಸಿ ಇಲ್ಲಿನ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಹೈದರಾಬಾದ್: ತನ್ನ ಮಗಳನ್ನು ಮದುವೆ ಆಗಿದ್ದ ದಲಿತ ವ್ಯಕ್ತಿಯನ್ನು ಮರ್ಯಾದಾ ಹತ್ಯೆ ಮಾಡಿಸಿದ್ದ ಆರೋಪ ಹೊತ್ತಿದ್ದ ತೆಲಂಗಾಣದ ರಿಯಲ್ ಎಸ್ಟೇಟ್ ಉದ್ಯಮಿ ಮಾರುತಿ ರಾವ್, ತಮ್ಮ ತಪ್ಪಿಗೆ ಕ್ಷಮೆಯಾಚಿಸಿ ಇಲ್ಲಿನ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ದಲಿತ ಕ್ರೈಸ್ತ ಯುವಕ ಪ್ರಣಯ್ ಕುಮಾರ್ ಎಂಬಾತ ರಾವ್ ಅವರ ಪುತ್ರಿಯನ್ನು ಪ್ರೀತಿಸಿ ವಿವಾಹವಾಗಿದ್ದ. ಆದರೆ, ಈ ಮದುವೆಗೆ ರಾವ್ ವಿರೋಧ ವ್ಯಕ್ತಪಡಿಸಿದ್ದರು. 

ಇದರಂತೆ ಬಾಡಿಗೆ ಹಂತಕರಿಗೆ ರೂ.1 ಕೋಟಿ ಸುಪಾರಿ ಕೊಟ್ಟು 2018ರ ಸೆ.14ರಂದು ಅಳಿಯನನ್ನು ಕೊಲೆ ಮಾಡಿಸಿದ್ದ. ಆದರೆ, ಈ ಪ್ರಕರಣದಲ್ಲಿ ಮಗಳೇ ತಂದೆ ವಿರುದ್ಧ ದೂರು ನೀಡಿದ್ದಳು. ಪ್ರಕರಣದಲ್ಲಿ ತಾನು ದೋಷಿ ಆಗುತ್ತೇನೆಂದು ತಿಳಿದ ರಾವ್, ಮಗಳು ಹಾಗೂ ಪತ್ನಿಗೆ ಕ್ಷಮಾಪಣೆ ಪತ್ರ ಬರೆದು ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಮಾರುತಿ ರಾವ್ ಗುಜರಾತ್ ಮಾಜಿ ಗೃಹ ಸಚಿವ ಹರೆನ್ ಪಾಂಡ್ಯಾ ಕೊಲೆ ಪ್ರಕರಣದಲ್ಲಿಯೂ ಆರೋಪಿಯಾಗಿದ್ದರು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT