ಹತ್ಯೆಯಾದ ಪ್ರಣಯ್ ಪತ್ನಿಯೊಂದಿಗಿರುವ ಚಿತ್ರ (ಸಂಗ್ರಹ ಚಿತ್ರ) 
ದೇಶ

ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣ: ಅಳಿಯನ ಕೊಲೆ ಮಾಡಿಸಿದ್ದ ಉದ್ಯಮಿ ರಾವ್ ಆತ್ಮಹತ್ಯೆಗೆ ಶರಣು

ತನ್ನ ಮಗಳನ್ನು ಮದುವೆ ಆಗಿದ್ದ ದಲಿತ ವ್ಯಕ್ತಿಯನ್ನು ಮರ್ಯಾದಾ ಹತ್ಯೆ ಮಾಡಿಸಿದ್ದ ಆರೋಪ ಹೊತ್ತಿದ್ದ ತೆಲಂಗಾಣದ ರಿಯಲ್ ಎಸ್ಟೇಟ್ ಉದ್ಯಮಿ ಮಾರುತಿ ರಾವ್, ತಮ್ಮ ತಪ್ಪಿಗೆ ಕ್ಷಮೆಯಾಚಿಸಿ ಇಲ್ಲಿನ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಹೈದರಾಬಾದ್: ತನ್ನ ಮಗಳನ್ನು ಮದುವೆ ಆಗಿದ್ದ ದಲಿತ ವ್ಯಕ್ತಿಯನ್ನು ಮರ್ಯಾದಾ ಹತ್ಯೆ ಮಾಡಿಸಿದ್ದ ಆರೋಪ ಹೊತ್ತಿದ್ದ ತೆಲಂಗಾಣದ ರಿಯಲ್ ಎಸ್ಟೇಟ್ ಉದ್ಯಮಿ ಮಾರುತಿ ರಾವ್, ತಮ್ಮ ತಪ್ಪಿಗೆ ಕ್ಷಮೆಯಾಚಿಸಿ ಇಲ್ಲಿನ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ದಲಿತ ಕ್ರೈಸ್ತ ಯುವಕ ಪ್ರಣಯ್ ಕುಮಾರ್ ಎಂಬಾತ ರಾವ್ ಅವರ ಪುತ್ರಿಯನ್ನು ಪ್ರೀತಿಸಿ ವಿವಾಹವಾಗಿದ್ದ. ಆದರೆ, ಈ ಮದುವೆಗೆ ರಾವ್ ವಿರೋಧ ವ್ಯಕ್ತಪಡಿಸಿದ್ದರು. 

ಇದರಂತೆ ಬಾಡಿಗೆ ಹಂತಕರಿಗೆ ರೂ.1 ಕೋಟಿ ಸುಪಾರಿ ಕೊಟ್ಟು 2018ರ ಸೆ.14ರಂದು ಅಳಿಯನನ್ನು ಕೊಲೆ ಮಾಡಿಸಿದ್ದ. ಆದರೆ, ಈ ಪ್ರಕರಣದಲ್ಲಿ ಮಗಳೇ ತಂದೆ ವಿರುದ್ಧ ದೂರು ನೀಡಿದ್ದಳು. ಪ್ರಕರಣದಲ್ಲಿ ತಾನು ದೋಷಿ ಆಗುತ್ತೇನೆಂದು ತಿಳಿದ ರಾವ್, ಮಗಳು ಹಾಗೂ ಪತ್ನಿಗೆ ಕ್ಷಮಾಪಣೆ ಪತ್ರ ಬರೆದು ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಮಾರುತಿ ರಾವ್ ಗುಜರಾತ್ ಮಾಜಿ ಗೃಹ ಸಚಿವ ಹರೆನ್ ಪಾಂಡ್ಯಾ ಕೊಲೆ ಪ್ರಕರಣದಲ್ಲಿಯೂ ಆರೋಪಿಯಾಗಿದ್ದರು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿಕೆ ಶಿವಕುಮಾರ್

ಸಂಚಾರ್ ಸಾಥಿ ಆ್ಯಪ್ ನಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ; Video

ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಪ್ರಜೆಗಳ ಬಂಧನ; 29 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

Anantapur: ಶಾಸಕನ ರಾಸಲೀಲೆ Video ವೈರಲ್, ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಾಟ್ಸಪ್ ನಲ್ಲಿ ಹರಿಬಿಟ್ಟ MLA!

HR88B8888: ದಾಖಲೆ ಮೊತ್ತಕ್ಕೆ ಕಾರಿನ ನಂಬರ್ ಗೆ ಬಿಡ್ ಮಾಡಿದ್ದ ಉದ್ಯಮಿಗೆ ಸಂಕಷ್ಟ, ಆಸ್ತಿ ಕುರಿತು ಸರ್ಕಾರ ತನಿಖೆ!

SCROLL FOR NEXT