ಅಶೋಕ್-ಸಚಿನ್-ಅಮಿತ್ ಶಾ 
ದೇಶ

ಮಧ್ಯ ಪ್ರದೇಶ ಆಯ್ತು, ಇದೀಗ ಬಿಜೆಪಿಯ ಮುಂದಿನ ಟಾರ್ಗೆಟ್ ರಾಜಸ್ಥಾನ?

ಜ್ಯೋತಿರಾಧಿತ್ಯ ಸಿಂಧಿಯಾ ಅವರ ರಾಜೀನಾಮೆಯ ನಂತರ, ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರವು ತನ್ನ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇನ್ನು ಕಾಂಗ್ರೆಸ್ ನ 17 ಶಾಸಕರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ.

ನವದೆಹಲಿ: ಜ್ಯೋತಿರಾಧಿತ್ಯ ಸಿಂಧಿಯಾ ಅವರ ರಾಜೀನಾಮೆಯ ನಂತರ, ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರವು ತನ್ನ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇನ್ನು ಕಾಂಗ್ರೆಸ್ ನ 17 ಶಾಸಕರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. 

ಮಧ್ಯಪ್ರದೇಶ ಆಯ್ತು. ಇನ್ನು ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಬಾಂಧವ್ಯ ಅಷ್ಟಕಷ್ಟೆ ಆಗಿರುವುದರಿಂದ ಬಿಜೆಪಿಯ ಮುಂದಿನ ಅಜೆಂಡಾ ರಾಜಸ್ತಾನವಾಗಬಹುದು. 

ಇತ್ತೀಚಿನ ಬೆಳವಣಿಗೆಯಲ್ಲಿ ವಜ್ರ ವ್ಯಾಪಾರಿ ರಾಜೀವ್ ಆರೋರಾ ಅವರನ್ನು ರಾಜ್ಯಸಭೆಗೆ ಕಳುಹಿಸುವ ಪ್ರಸ್ತಾಪವನ್ನು ಸಿಎಂ ಅಶೋಕ್ ಗೆಹ್ಲೋಟ್ ಮಾಡಿದ್ದರು. ಈ ಕ್ರಮವನ್ನು ಸಚಿನ್ ಪೈಲಟ್ ತೀವ್ರವಾಗಿ ವಿರೋಧಿಸಿದ್ದರು. ಇದು ಬಿಜೆಪಿಗೆ ಅಸ್ತ್ರವಾಗಬಹುದು.

ಉದ್ಯಮಿಯೊಬ್ಬರನ್ನು ರಾಜ್ಯಸಭೆಗೆ ಕಳುಹಿಸುವುದರಿಂದ ತಪ್ಪು ಸಂದೇಶ ಕಳುಹಿಸಿದಂತಾಗುತ್ತದೆ. ಆದ್ದರಿಂದ ಪಕ್ಷದ ನಿಷ್ಠಾವಂತ ಸದಸ್ಯರನ್ನು ಮೇಲ್ಮನೆಗೆ ಕಳುಹಿಸುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸಲಹೆ ನೀಡಿದ್ದರು. 

ಕೋಟಾ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಸಾಮೂಹಿಕ ಸಾವು ಸೇರಿದಂತೆ ಹಲವು ವಿಷಯಗಳ ಬಗ್ಗೆ ಸರ್ಕಾರದ ವಿರುದ್ಧ ಪೈಲಟ್ ಕಿಡಿಕಾರಿದ್ದರು. ಇದೇ ಮಾತ್ರವಲ್ಲ. ಇತರ ಹಲವು ವಿಷಯಗಳ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. 

ಒಂದು ವೇಳೆ ಬಿಜೆಪಿ ಮಧ್ಯಪ್ರದೇಶದ ಫಾರ್ಮುಲಾವನ್ನೇ ರಾಜಸ್ಥಾನದಲ್ಲೂ ಆಟವಾಡಿದರೆ ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT