ದೇಶ

ವ್ಯಾಪಕವಾಗಿ ಹರಡಿದ ಕೊರೋನಾ: ವಿದೇಶಿಯರು, ಎನ್ಆರ್'ಐಗಳಿಗೆ ಟಿಟಿಡಿ ನಿರ್ಬಂಧ

Manjula VN

ಅಮರಾವತಿ: ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಕ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿ (ಟಿಟಿಡಿ), ವಿದೇಶಿಯರು ಹಾಗೂ ಅನಿವಾಸಿ ಭಾರತೀಯರಿಗೆ ತಿರುಪತಿ ದರ್ಶನಕ್ಕೆ ನಿರ್ಬಂಧ ಹೇರಿದೆ. 

ವಿದೇಶಿ ಪ್ರಜೆಗಳು ಹಾಗೂ ಅನಿವಾಸಿ ಭಾರತೀಯರಿಗೆ ಕೆಲ ಸೂಚನೆಗಳನ್ನು ನೀಡಿರುವ ಟಿಟಿಡಿ, 28 ದಿನಗಳ ಬಳಿಕವೇ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವಂತೆ ತಿಳಿಸಿದೆ. 

ದೇವಾಲಯಕ್ಕ ಬರುವ ಲಕ್ಷಾಂತರ ಭಕ್ತರ ಹಿತದೃಷ್ಟಿಯಿಂದ  ಎಲ್ಲಾ ಮುಂಜಾಕ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. 

SCROLL FOR NEXT