ಸಿಂಧಿಯಾ ಬಿಜೆಪಿ ಸೇರ್ಪಡೆ 
ದೇಶ

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಮಧ್ಯ ಪ್ರದೇಶದಿಂದ ಜ್ಯೋತಿರಾದಿತ್ಯ ಸಿಂಧಿಯಾ ಕಣಕ್ಕೆ

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಮಾಜಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದು ಕೇಸರಿ ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮಾರ್ಚ್ 26 ರಂದು ನಡೆಯಲಿರುವ ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಮಾಜಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದು ಕೇಸರಿ ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮಾರ್ಚ್ 26 ರಂದು ನಡೆಯಲಿರುವ ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಧ್ಯಪ್ರದೇಶದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಮಂಗಳವಾರ ಕಾಂಗ್ರೆಸ್ ತೊರೆದಿದ್ದ ಸಿಂಧಿಯಾ ಇಂದು ಕಮಲ ಪಾಳಯಕ್ಕೆ ಸೇರ್ಪಡೆಯಾಗಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಅಸ್ಸಾಂನಿಂದ ಭುವನೇಶ್ವರ್ ಕಲಿಟಾ, ಬಿಹಾರದಿಂದ ವಿವೇಕ್ ಠಾಕೂರ್, ಅಭಯ್ ಭಾರದ್ವಾಜ್ ಮತ್ತು ಗುಜರಾತ್‍ ನಿಂದ  ರಾಮಿಲಾಬೆನ್ ಬಾರಾ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ.

ಅಲ್ಲದೆ, ಜಾರ್ಖಂಡ್‌ನಿಂದ ದೀಪಕ್ ಪ್ರಕಾಶ್, ಮಣಿಪುರದಿಂದ ಲೀಸೆಬಾ ಮಹಾರಾಜ, ಮಹಾರಾಷ್ಟ್ರದಿಂದ ಉದಯನ್ ರಾಜೇ ಭೋಸ್ಲೆ ಮತ್ತು ರಾಜಸ್ಥಾನದಿಂದ ರಾಜೇಂದ್ರ ಗೆಹ್ಲೋಟ್ ಅವರನ್ನು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!