ರಾಹುಲ್ ಗಾಂಧಿ 
ದೇಶ

ತೈಲ ಬೆಲೆ ಇಳಿಕೆ ಲಾಭ ಜನರಿಗೆ ವರ್ಗಾಯಿಸಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಆಗ್ರಹ

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇದರ ಪ್ರಯೋಜನಗಳನ್ನು ದೇಶದ ಸಾಮಾನ್ಯ ಜನರಿಗೆ ತಲುಪಿಸಲು ಯಾವುದೇ ಪ್ರಯತ್ನ ನಡೆಸದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯ, ಜನರಿಂದ ಚುನಾಯಿತಗೊಂಡಿರುವ ಕಾಂಗ್ರೆಸ್ ಸರ್ಕಾರಗಳನ್ನು ಅಭದ್ರಗೊಳಿಸುವಲ್ಲಿ ಬಿಡುವಿಲ್ಲದೆ...

ನವದೆಹಲಿ: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇದರ ಪ್ರಯೋಜನಗಳನ್ನು ದೇಶದ ಸಾಮಾನ್ಯ ಜನರಿಗೆ ತಲುಪಿಸಲು ಯಾವುದೇ ಪ್ರಯತ್ನ ನಡೆಸದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯ, ಜನರಿಂದ ಚುನಾಯಿತಗೊಂಡಿರುವ ಕಾಂಗ್ರೆಸ್ ಸರ್ಕಾರಗಳನ್ನು ಅಭದ್ರಗೊಳಿಸುವಲ್ಲಿ ಬಿಡುವಿಲ್ಲದೆ, ತೊಡಗಿಸಿಕೊಂಡಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವಲ್ಲಿ ಬಿಡುವಿಲ್ಲದೆ ತೊಡಗಿಸಿಕೊಂಡಿರುವ ಪ್ರಧಾನಿ ಕಾರ್ಯಾಲಯ, ಜಾಗತಿಕ ಮಾರುಕಟ್ಟೆಗಳಲ್ಲಿ ಶೇ. ೩೫ರಷ್ಟು ಕುಸಿದಿರುವ ತೈಲ ಬೆಲೆಗಳ ಲಾಭವನ್ನು ಜನರಿಗೆ ವರ್ಗಾಯಿಸುವುದನ್ನು ಮರೆತಂತೆ ಕಾಣುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ದರ ಇಳಿಕೆಯ ಲಾಭವನ್ನು ದಯಮಾಡಿ ಭಾರತೀಯರಿಗೆ ವರ್ಗಾಯಿಸಿ, ಲೀಟರ್ ಪೆಟ್ರೋಲ್, ಡಿಸೇಲ್ ಬೆಲೆಯನ್ನು ೬೦ ರೂಪಾಯಿಗೆ ಇಳಿಸಬಹುದಲ್ಲವೆ? ಸ್ಥಗಿತಗೊಂಡಿರುವ ದೇಶದ ಆರ್ಥಿಕತೆಗೆ ಇದರಿಂದ ಲಾಭವಾಗಲ್ಲವೆ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ತೈಲ ಬೆಲೆಗಳು ಕುಸಿದಿರುವ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದು, ಬೆಲೆ ಇಳಿಕೆಯ ಲಾಭಗಳನ್ನು ಜನಸಾಮಾನ್ಯರಿಗೆ ವರ್ಗಾಯಿಸಿ, ಆರ್ಥಿಕ ಚೇತರಿಕೆಗೆ ತೈಲ ಬೆಲೆ ಕುಸಿತಗೊಂಡಿರುವ ಸದವಕಾಶ ಬಳಸಿಕೊಳ್ಳಲು ಸರ್ಕಾರ ಸಿದ್ದವಾಗಿಲ್ಲ ಎಂದು ದೂರಿದ್ದಾರೆ. 

ದೇಶಾದ್ಯಂತ ಪ್ರಮುಖ ಮೆಟ್ರೋ ನಗರಗಳಲ್ಲಿ ತೈಲೋತ್ಪನ್ನಗಳ ಬೆಲೆಗಳನ್ನು ಲೀಟರ್ ಗೆ ೨ ರೂಪಾಯಿ ಇಳಿಸಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ ೨.೬೯ ರೂ ತಗ್ಗಿಸಿ, ಲೀಟರ್ ಗೆ ೭೦.೨೯ ರೂಪಾಯಿ ನಿಗದಿಪಡಿಸಲಾಗಿದೆ. ಡೀಸೆಲ್ ಬೆಲೆ ೨.೩೩ ರೂ ಇಳಿಸಿ, ಲೀಟರ್‌ಗೆ ೬೩.೦೧ ನಿಗದಿಪಡಿಸಲಾಗಿದೆ.

ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಸರ್ಕಾರದೊಂದಿಗೆ ಸಮರಕ್ಕೆ ಇಳಿದಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವ ಪ್ರಯತ್ನ ಎಂದು ಕಾಂಗ್ರೆಸ್ ದೂರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT