ತೆಲಂಗಾಣ: ನಿವೃತ್ತ ಪೊಲೀಸ್ ಅಧಿಕಾರಿ ಕೊಂದು, ಸೆಲ್ಫೀ ತೆಗದುಕೊಂಡ ಆರೋಪಿ! 
ದೇಶ

ತೆಲಂಗಾಣ: ನಿವೃತ್ತ ಪೊಲೀಸ್ ಅಧಿಕಾರಿ ಕೊಂದು, ಸೆಲ್ಫೀ ತೆಗದುಕೊಂಡ ಆರೋಪಿ!

ನಿವೃತ್ತ ಪೊಲೀಸ ಅಧಿಕಾರಿಯನ್ನು ಹತ್ಯೆಗೈದು, ಮೃತದೇಹದ ಮುಂದೆ ನಿಂತು ಆರೋಪಿಯೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಘಟನೆ ತೆಲಂಗಾಣ ರಾಜ್ಯದಲ್ಲಿ ನಡೆದಿದೆ. 

ಹೈದರಾಬಾದ್: ನಿವೃತ್ತ ಪೊಲೀಸ ಅಧಿಕಾರಿಯನ್ನು ಹತ್ಯೆಗೈದು, ಮೃತದೇಹದ ಮುಂದೆ ನಿಂತು ಆರೋಪಿಯೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಘಟನೆ ತೆಲಂಗಾಣ ರಾಜ್ಯದಲ್ಲಿ ನಡೆದಿದೆ. 

ಶಿವರಾಜ್ ಮೃತಪಟ್ಟಿರುವ ನಿವೃದ್ಧ ಸಹಾಯಕ ಎಎಸ್ಐ ಎಂದು ಗುರ್ತಿಸಲಾಗಿದೆ. ಆರೋಪಿಯ ಹೆಸರು ವಿವೇಕ್ ಎಂದು ತಿಳಿದುಬಂದಿದೆ. 

ಮೃತ ಶಿವರಾಜ್ ಹಾಗೂ ಜಯರಾಜ್ ಎಂಬುವವರ ನಡುವೆ ಭೂ ವಿವಾದ ಏರ್ಪಟ್ಟಿತ್ತು. ಇದರಂತೆ ಶುಕ್ರವಾರ ಜಯರಾತ್ ಪುತ್ರರಾದ ವಿವೇಕ್ ಹಾಗೂ ಮನೋಜ್ ಎಂಬುವವರು ಶಿವರಾಜ್ ಮನೆಗೆ ಬಂದು ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ತೀವ್ರ ವಿಕೋಪಕ್ಕೆ ತಿರುಗಿದೆ. ಈ ವೇಳೆ ವಿವೇಕ್ ಎಂಬಾದ ರಾಡ್ ನಿಂದ ಶಿವರಾಜ್ ತಲೆಗೆ ಬಲವಾಗಿ ಹೊಡೆದಿದ್ದಾನೆ. 

ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಶಿವರಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಳಿಕ ಆರೋಪಿ ವಿವೇಕ್ ಮೃತದೇಹದ ಮುಂದೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದಾನೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಇದೀಗ ಆರೋಪಿಗಳಾದ ಮನೋಜ್, ವಿವಾಕ್ ಹಾಗೂ ಅವರ ತಾಯಿ ವನಜಾ ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT