ಮಧ್ಯಪ್ರದೇಶ ಕಾಂಗ್ರೆಸ್ ಬಂಡಾಯ ಶಾಸಕರು 
ದೇಶ

ಮಧ್ಯಪ್ರದೇಶ ಬಿಕ್ಕಟ್ಟು: 12 ಕಾಂಗ್ರೆಸ್ ಬಂಡಾಯ ಶಾಸಕರಿಗೆ ಸ್ಪೀಕರ್ ನೋಟಿಸ್, ನಾಳೆಯೊಳಗೆ ಪ್ರತಿಕ್ರಿಯೆಗೆ ಸೂಚನೆ 

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಧ್ಯಪ್ರದೇಶದ 12 ಕಾಂಗ್ರೆಸ್ ಬಂಡಾಯ ಶಾಸಕರುಗಳಿಗೆ ವಿಧಾನಸಭೆ ಸ್ಪೀಕರ್ ಎನ್. ಪಿ. ಪ್ರಜಾಪತಿ ನೋಟಿಸ್ ನೀಡಿದ್ದು, ನಾಳೆಯೊಳಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.

ಭೂಪಾಲ್ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಧ್ಯಪ್ರದೇಶದ 12 ಕಾಂಗ್ರೆಸ್ ಬಂಡಾಯ ಶಾಸಕರುಗಳಿಗೆ 
ವಿಧಾನಸಭೆ ಸ್ಪೀಕರ್ ಎನ್. ಪಿ. ಪ್ರಜಾಪತಿ ನೋಟಿಸ್ ನೀಡಿದ್ದು, ನಾಳೆಯೊಳಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.

ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆಯೇ ಅಥವಾ ಬಲವಂತದಿಂದ ರಾಜೀನಾಮೆ ನೀಡಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಸ್ಪೀಕರ್ ಸೂಚಿಸಿರುವುದಾಗಿ ವಿಧಾನಸಭೆಯ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

ಈ ಮಧ್ಯೆ ಮಾರ್ಚ್16 ರಂದು ಬಿಜೆಪಿ ವಿಶ್ವಾಸ ಮತ ಯಾಚನೆಗೆ ಕೋರಿದ್ದು, 22 ಶಾಸಕರ ನಿರ್ಧಾರದ ಆಧಾರದ ಮೇಲೆ ವಿಶ್ವಾಸ ಮತ ಯಾಚಿಸಲು ಸಿದ್ಧವಿರುವುದಾಗಿ ಕಾಂಗ್ರೆಸ್ ಹೇಳಿದೆ. 

ರಾಜೀನಾಮೆ ನೀಡಿರುವ ಆರು ಸಚಿವರು ಸೇರಿದಂತೆ 22 ಶಾಸಕರುಗಳಿಗೆ ಸ್ಪೀಕರ್ ಪ್ರಜಾಪತಿ ನೋಟಿಸ್ ನೀಡಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದು, ಸ್ಪೀಕರ್ ಅವರನ್ನು ಭೇಟಿ ಮಾಡಿ ಏಕೆ ರಾಜೀನಾಮೆ ಸಲ್ಲಿಸಲಿಲ್ಲ ಎಂಬುದು ಗೊತ್ತಾಗಬೇಕಾಗಿದೆ ಎಂದಿದ್ದಾರೆ.

ಕೇಂದ್ರದ ಮಾಜಿ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಮಂಗಳವಾರ ಪಕ್ಷ ತೊರೆದ ಬೆನ್ನಲ್ಲೇ, 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವುದರಿಂದ 15 ತಿಂಗಳ ಆಡಳಿತ ನಡೆಸಿರುವ ಕಮಲ್ ನಾಥ್ ಸರ್ಕಾರ ತೀವ್ರ ಬಿಕ್ಕಟ್ಟು ಎದುರಿಸುವಂತಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT