ದೇಶ

ಸುಪ್ರೀಂ, ದೆಹಲಿ ಹೈಕೋರ್ಟ್ ಗೂ ತಟ್ಟಿದ 'ಕೊರೋನಾ'ಬಿಸಿ: ಮಾರ್ಚ್ 16ರಿಂದ ತುರ್ತು ವಿಚಾರಣೆ ಮಾತ್ರ!

ಕೊರೋನಾ ವೈರಸ್ ಭೀತಿ ಸುಪ್ರೀಂ ಕೋರ್ಟ್ ವರೆಗೆ ತಲುಪಿದೆ. ಇದೇ 16ರಿಂದ ತುರ್ತು ವಿಚಾರಣೆ ಮಾತ್ರ ನಡೆಸಲಿದ್ದು ನ್ಯಾಯಾಲಯದ ಕೊಠಡಿಯೊಳಗೆ ಸಂಬಂಧಪಟ್ಟ ವಕೀಲರು ಬಿಟ್ಟರೆ ಬೇರೆ ಯಾರನ್ನೂ ಒಳಗೆ ಬಿಡುವುದಿಲ್ಲ.

ನವದೆಹಲಿ: ಕೊರೋನಾ ವೈರಸ್ ಬಿಸಿ ಸುಪ್ರೀಂ ಕೋರ್ಟ್ ಗೂ ತಟ್ಟಿದೆ. ಇದೇ 16ರಿಂದ ತುರ್ತು ವಿಚಾರಣೆ ಮಾತ್ರ ನಡೆಸಲಿದ್ದು ನ್ಯಾಯಾಲಯದ ಕೊಠಡಿಯೊಳಗೆ ಸಂಬಂಧಪಟ್ಟ ವಕೀಲರು ಬಿಟ್ಟರೆ ಬೇರೆ ಯಾರಿಗೂ ಪ್ರವೇಶವಿರುವುದಿಲ್ಲ.

ಮಾರ್ಚ್ 16ರ ನಂತರ ಕೆಲ ದಿನಗಳವರೆಗೆ ಸುಪ್ರೀಂ ಕೋರ್ಟ್ ನ 14 ನ್ಯಾಯಪೀಠಗಳ ಬದಲಿಗೆ ಕೇವಲ 6 ನ್ಯಾಯಪೀಠಗಳು ಕಾರ್ಯನಿರ್ವಹಿಸಲಿವೆ. ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್-19ನ್ನು ಜಾಗತಿಕ ಸಾಂಕ್ರಾಮಿಕ ಎಂದು ಘೋಷಿಸಿದ ನಂತರ ಭಾರತ ಸರ್ಕಾರ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮ ಬಳಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರ ನಿವಾಸದಲ್ಲಿ ನಿನ್ನೆ ಮತ್ತು ಮೊನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಸುಪ್ರೀಂ ಕೋರ್ಟ್ ಅಧಿಸೂಚನೆಯನ್ನು ಅದರ ಪ್ರಧಾನ ಕಾರ್ಯದರ್ಶಿ ಸಂಜೀವ್ ಎಸ್ ಕಲ್ಗಾಂವ್ ಕರ್ ಹೊರಡಿಸಿದ್ದು, ಇನ್ನು ಕೆಲ ದಿನಗಳವರೆಗೆ ತುರ್ತು ವಿಚಾರಣೆಯನ್ನು ಮಾತ್ರ ನಡೆಸಲಾಗುವುದು. ವಿಚಾರಣೆ ವೇಳೆ ಅಗತ್ಯ ಸಂಬಂಧಪಟ್ಟವರು ಮಾತ್ರ ಕೋರ್ಟ್ ಸಭಾಂಗಣದಲ್ಲಿ ಇರಬೇಕಾಗುತ್ತದೆ ಎಂದರು. 

ಸುಪ್ರೀಂ ಕೋರ್ಟ್ ಘೋಷಣೆ ಹೊರಬರುತ್ತಿದ್ದಂತೆ ದೆಹಲಿ ಹೈಕೋರ್ಟ್ ಸಹ ನಿನ್ನೆ ತುರ್ತು ಕ್ರಮ ಕೈಗೊಂಡಿದ್ದು ಮಾರ್ಚ್ 16ರ ನಂತರ ತುರ್ತು ವಿಚಾರಣೆ ಮಾತ್ರ ನಡೆಸಲಾಗುವುದು ಎಂದು ಹೇಳಿದೆ. ಅಗತ್ಯಬಿದ್ದರೆ ಮಾತ್ರ ಕಕ್ಷಿದಾರರು ಮತ್ತು ಅವರ ಸಂಬಂಧಪಟ್ಟವರು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಸಭೆಯ ನಂತರ ಕೋರ್ಟ್ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT