ದೇಶ

ಭಾರತದಲ್ಲಿ 'ಕೊರೋನಾ'ಪೀಡಿತರ ಸಂಖ್ಯೆ 107ಕ್ಕೆ ಏರಿಕೆ,ಕೊಚ್ಚಿ ಏರ್ ಪೋರ್ಟ್ ಗೆ ಬಂದಿಳಿದ 20 ಪ್ರಯಾಣಿಕರು  

ಇಂಗ್ಲೆಂಡಿನಿಂದ ಬಂದಿದ್ದ ಪ್ರಜೆ ಸೇರಿದಂತೆ ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ 107ಕ್ಕೇರಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೋಂಕನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 

ನವದೆಹಲಿ: ಇಂಗ್ಲೆಂಡಿನಿಂದ ಬಂದಿದ್ದ ಪ್ರಜೆ ಸೇರಿದಂತೆ ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ 107ಕ್ಕೇರಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೋಂಕನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 

14 ಹೊಸ ಕೊರೋನಾ ಪೀಡಿತ ಪ್ರಕರಣ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಅಂಕಿಅಂಶದಿಂದ ತಿಳಿದುಬಂದಿದೆ. 

ಕೊರೋನಾ ಹೆಚ್ಚು ಹಬ್ಬುವುದನ್ನು ತಡೆಗಟ್ಟಲು ಕರ್ನಾಟಕ, ಉತ್ತರ ಪ್ರದೇಶ, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳು ಶಾಲಾ ಕಾಲೇಜುಗಳಿಗೆ ಈ ತಿಂಗಳ ಅಂತ್ಯದವರೆಗೆ ರಜೆ ಘೋಷಿಸಲಾಗಿದೆ. 

ಇದುವರೆಗೆ ಕೊರೋನಾಕ್ಕೆ ನಲುಗಿ ಹೋಗಿರುವ ದೇಶಗಳಲ್ಲಿ ಚೀನಾದ ನಂತರದ ಸ್ಥಾನದಲ್ಲಿ ಇಟಲಿಯಿದೆ. ಇಲ್ಲಿ 415ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು 11 ಸಾವಿರ ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇತ್ತೀಚಿನ ವರದಿಯಂತೆ ಪ್ರಪಂಚದಲ್ಲಿ 21 ಸಾವಿರದ 157 ಮಂದಿ ಕೊರೋನಾಕ್ಕೆ ಮೃತಪಟ್ಟಿದ್ದು ಅವರಲ್ಲಿ ಇಟಲಿಯಲ್ಲಿ 1ಸಾವಿರದ 441ಮಂದಿ ಮೃತಪಟ್ಟಿದ್ದಾರೆ.

ಸ್ಪೈನ್ ನಲ್ಲಿ 1,500 ಹೊಸ ಕೊರೋನಾ ಕೇಸುಗಳು ವರದಿಯಾಗಿದ್ದು ಇಲ್ಲಿ ಒಟ್ಟು ಕೊರೋನಾ ಪೀಡಿತರ ಸಂಖ್ಯೆ 5 ಸಾವಿರದ 753 ಆಗಿದೆ. ಯುರೋಪ್ ಖಂಡದಲ್ಲಿ ಇಟಲಿಯ ನಂತರ ಸ್ಪೈನ್ ನಲ್ಲಿ ಅಧಿಕವಾಗಿದೆ. ಇಲ್ಲಿ ಒಟ್ಟು 183 ಮಂದಿ ಕೊರೋನಾಗೆ ಮೃತಪಟ್ಟಿದ್ದಾರೆ. ಇರಾನ್ ನಲ್ಲಿ 611 ಮಂದಿ ಸಾವು ನೋವು ಕಂಡಿದ್ದಾರೆ.

ಕಳೆದ ವರ್ಷ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕೊರೋನಾ ವೈರಸ್ ಮೊದಲ ಬಾರಿಗೆ ಕಾಣಿಸಿಕೊಂಡಿತು. ಇಂದು 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದೆ. 1,30 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ತಗುಲಿದೆ. ಇದನ್ನು ಸಾಂಕ್ರಾಮಿಕ ರೋಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿದೆ.

ದುಬೈಯಿಂದ ಬಂದಿಳಿದ ವಿಮಾನ: ದುಬೈ ಮೂಲದ ವಿಮಾನ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಬಂದಿಳಿದಿದ್ದು ಅದರಲ್ಲಿ 20 ಪ್ರಯಾಣಿಕರು ಆಗಮಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT