ಮಮತಾ ಬ್ಯಾನರ್ಜಿ 
ದೇಶ

ಕೊರೋನಾ: ಜನಸಂದಣಿಯಿಂದ ದೂರವಿರಿ: 10 ಸಾವಿರ ಜನಗಳ ನಡುವೆ ಮಮತಾ ಬ್ಯಾನರ್ಜಿ ಭಾಷಣ! 

ಮಾರಣಾಂತಿಕ ಕೊರೋನಾ ವೈರಸ್ ಕುರಿತ ಸರ್ಕಾರದ ನಿರ್ದೇಶನ ಉಲ್ಲಂಘಿಸಿ ಸ್ವತಃ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದು ಗೊತ್ತೇ ಇದೆ. ಈಗ ಇಂಥಹದ್ದೇ ಎಡವಟ್ಟೊಂದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಮಾಡಿಕೊಂಡಿದ್ದಾರೆ. 

ಕೋಲ್ಕತ್ತ: ಮಾರಣಾಂತಿಕ ಕೊರೋನಾ ವೈರಸ್ ಕುರಿತ ಸರ್ಕಾರದ ನಿರ್ದೇಶನ ಉಲ್ಲಂಘಿಸಿ ಸ್ವತಃ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದು ಗೊತ್ತೇ ಇದೆ. ಈಗ ಇಂಥಹದ್ದೇ ಎಡವಟ್ಟೊಂದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಮಾಡಿಕೊಂಡಿದ್ದಾರೆ. 

ಒಂದೆರಡು ತಿಂಗಳ ಕಾಲ ಕೊರೋನಾ ವೈರಸ್ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಜನಸಂದಣಿಯಿಂದ ದೂರವಿರಬೇಕು ಎಂದು ಮಮತಾ ಬ್ಯಾನರ್ಜಿ 10 ಸಾವಿರ ಜನಗಳ ನಡುವೆ ಮಮತ ಬ್ಯಾನರ್ಜಿ ಹೇಳಿದ್ದಾರೆ. 

ಕೊರೋನಾ ವೈರಸ್ ತಡೆಗೆ ಸಲಹೆಗಳನ್ನು ರಾಜ್ಯ ಸರ್ಕಾರಗಳಿಗೆ ಕಳಿಸಿಕೊಟ್ಟಿದ್ದ ಕೇಂದ್ರ ಸರ್ಕಾರ ಹೆಚ್ಚು ಸಾರ್ವಜನಿಕ ಸಭೆಗಳು ನಡೆಯದಂತೆ ಎಚ್ಚರ ವಹಿಸಲು ಸೂಚನೆ ನೀಡಿತ್ತು. ಆದರೆ ನೇತಾಜಿ ಇಂಡೋರ್ ಸ್ಟೇಡಿಯಂ ನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯರ್ಕಮದಲ್ಲಿ ಮಾತನಾಡಿರುವ ಮಮತಾ ಬ್ಯಾನರ್ಜಿ ಸುಮಾರು 10,000 ಜನರನ್ನುದ್ದೇಶಿಸಿ ಮಾತನಾಡಿದ್ದು, ಕೇಂದ್ರ ಸರ್ಕಾರ ಕಳಿಸಿಕೊಟ್ಟಿದ್ದ ಸಲಹೆ-ಸೂಚನೆಗಳನ್ನು ವೇದಿಕೆಯಲ್ಲೇ ಓದಿ ಜನಸಂದಣಿಯಿಂದ ದೂರವಿರಬೇಕು ಎಂದು ಹೇಳಿದ್ದಾರೆ. 

ಕೇಂದ್ರ ಸರ್ಕಾರದ ಸೂಚನೆಯ ಹೊರತಾಗಿಯೂ ನಾವಿಲ್ಲಿ ಸೇರಿದ್ದೇವೆ ಏಕೆಂದರೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ದಿನಗಳು ಮತ್ತೆ ಬರುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT