ನಿವೃತ್ತ ಸಿಜೆಐ ರಂಜನ್ ಗೊಗೋಯ್ 
ದೇಶ

ನಿವೃತ್ತ ಸಿಜೆಐ ರಂಜನ್ ಗೊಗೋಯ್ ರಾಜ್ಯಸಭೆಗೆ ನಾಮನಿರ್ದೇಶನ!

ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಮನಿರ್ದೇಶನ ಮಾಡಿದ್ದಾರೆ.

ನವದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಮನಿರ್ದೇಶನ ಮಾಡಿದ್ದಾರೆ.

ಗೊಗೋಯ್ ಅಕ್ಟೋಬರ್ 3, 2018ರಿಂದ ನವೆಂಬರ್ 17, 2019ರವರೆಗೂ ಭಾರತದ 46ನೇ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.

ನವೆಂಬರ್ 9, 2019ರಲ್ಲಿ ಇವರ ನೇತೃತ್ವದಲ್ಲಿನ ಪಂಚ ನ್ಯಾಯಾಧೀಶರ ಪೀಠ ಶತಮಾನಗಳಿಂದ ಬಾಕಿ ಉಳಿದಿದ್ದ ಅಯೋಧ್ಯ ವಿವಾದವನ್ನು ಬಗೆಹರಿಸಿತ್ತು. 

ಗೊಗೊಯ್ ಕಚೇರಿ ತೊರೆಯುವ ಮುನ್ನ, ಭಾರತದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ಸಂಸ್ಥೆಯನ್ನು ಕೆಳಮಟ್ಟಕ್ಕೆ ಕೊಂಡೊಯ್ಯಲು ತೀವ್ರವಾಗಿ ಬಳಕೆಯಾಗಲಿವೆ ಎಂದು ಹೇಳಿಕೆ ನೀಡಿದ್ದರು. 

ತಮ್ಮದೊಂದು ಭಾಗವು ಯಾವಾಗಲೂ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಉಳಿಯುತ್ತದೆ ಎಂದು ಗೊಗೋಯ್ ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ ನಲ್ಲಿ ಬಿಟ್ಟುಹೋದ ಪತ್ರದಲ್ಲಿ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT