ಸಾಂದರ್ಭಿಕ ಚಿತ್ರ 
ದೇಶ

ಪ. ಬಂಗಾಳ: ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ, ಗೋವಿನ ಮೂತ್ರ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಿಂದ 20 ಕಿ.ಮೀ ದೂರದಲ್ಲಿರುವ ಹೂಗ್ಲಿ ಜಿಲ್ಲೆಯ ಡಾಂಕುನಿ ಎಂಬಲ್ಲಿ ರಸ್ತೆಬದಿಯ ಅಂಗಡಿಯಲ್ಲಿ ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ ಮತ್ತು ಗೋವಿನ ಮೂತ್ರವನ್ನು ಮಾರಾಟ...

ಕೋಲ್ಕತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಿಂದ 20 ಕಿ.ಮೀ ದೂರದಲ್ಲಿರುವ ಹೂಗ್ಲಿ ಜಿಲ್ಲೆಯ ಡಾಂಕುನಿ ಎಂಬಲ್ಲಿ ರಸ್ತೆಬದಿಯ ಅಂಗಡಿಯಲ್ಲಿ ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ ಮತ್ತು ಗೋವಿನ ಮೂತ್ರವನ್ನು ಮಾರಾಟ ಮಾಡುತ್ತಿದ್ದ ಹಾಲಿನ ವ್ಯಾಪಾರಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಜನತೆಗೆ ಮೋಸ ಮಾಡಿದ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಮಬುದ್ ಅಲಿ ಎಂಬುವವರನ್ನು ಹೂಗ್ಲಿ ಪೊಲೀಸರು ಬಂಧಿಸಿದ್ದಾರೆ.

ಅಲಿ, ಸಗಣಿ ಮತ್ತು ಗೋವಿನ ಮೂತ್ರ ಸೇವಿಸಿದರೆ ಕೊರೋನಾ ವೈರಸ್ ಸೋಂಕು ನಿವಾರಣೆಯಾಗುತ್ತದೆ ಎಂದು ಜನರನ್ನು ನಂಬಿಸಿ ನಿನ್ನೆಯಿಂದ ರಸ್ತೆಯಲ್ಲಿ ಅದನ್ನು ಮಾರಾಟ ಮಾಡುತ್ತಿದ್ದನ್ನು. ಹಿಂದೂ ಮಹಾಸಭಾ ದೆಹಲಿಯಲ್ಲಿ ನಡೆಸಿದ ಗೋಮೂತ್ರ ಕಾರ್ಯಕ್ರಮದಿಂದ ಪ್ರೇರಿತನಾಗಿ ಸಗಣಿ ಮತ್ತು ಗೋಮೂತ್ರ ಮಾರುತ್ತಿರುವುದಾಗಿ ಅಲಿ ಹೇಳಿದ್ದಾರೆ.

ಅಲಿ, 500 ರೂಪಾಯಿಗೆ ಒಂದು ಲೀಟರ್ ಗೋಮೂತ್ರ ಮತ್ತು 500 ರೂಪಾಯಿಗೆ 1 ಕೆ.ಜಿ. ಸಗಣಿ ಮಾರಾಟ ಮಾಡುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT