ಮುರಳೀಧರನ್ 
ದೇಶ

ಕೊರೋನಾ ವೈರಸ್: ಸ್ವಯಂ ನಿರ್ಬಂಧ ವಿಧಿಸಿಕೊಂಡ ಕೇಂದ್ರ ಸಚಿವ ಮುರಳೀಧರನ್

ಕೇಂದ್ರ ಸಚಿವ ವಿ ಮುರಳೀಧರನ್ ಅವರು ತಮಗೂ ಕೊರೋನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿಯೇ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ.

ನವದೆಹಲಿ: ಕೇಂದ್ರ ಸಚಿವ ವಿ ಮುರಳೀಧರನ್ ಅವರು ತಮಗೂ ಕೊರೋನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿಯೇ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ.

ಸಚಿವ ಸಭೆಯಲ್ಲಿ ಭಾಗವಹಿಸಿದ್ದ ವೈದ್ಯರೊಬ್ಹರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಚಿವರಿಗೂ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸ್ವಯಂ ಪ್ರೇರಿತವಾಗಿ ದಿಗ್ಬಂಧನ ವಿಧಿಸಿಕೊಂಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮುರಳೀಧರನ್ ಅವರು ಮಾರ್ಚ್ 14ರಂದು ಕೇರಳದ ತಿರುವನಂತಪುರಂನಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸೋಂಕು ಪೀಡಿತ ವೈದ್ಯರನ್ನು ಭೇಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಗೆ ಹಿಂತಿರುಗಿದ ಬಳಿಕ ಸ್ವಯಂಪ್ರೇರಿತರಾಗಿ ದೆಹಲಿಯ ತಮ್ಮ ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಮುರಳೀಧರನ್ ಅವರಿಗೆ ಅವರ ಮನೆಯಲ್ಲಿಯೇ ವೈದ್ಯಕೀಯ ನೆರವು ನೀಡಲಾಗಿದ್ದು, ಸೋಂಕು ತಗುಲಿರುವ ಬಗ್ಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷಾ ವರದಿಗಳು ಬರುವ ತನಕ ಕೊರೋನಾ ವೈರಸ್ ತಗುಲಿರುವ ಬಗ್ಗೆ ಸ್ಪಷ್ಟಪಡಿಸಲಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶಾದ್ಯಂದ ವ್ಯಾಪಕವಾಗಿ ಹಬ್ಬುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಗೆ ಭಾರತದಲ್ಲಿ ಮೂವರು ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆಯಾಗಿದೆ. 

ಮಹಾರಾಷ್ಟ್ರದಲ್ಲಿ 64 ವರ್ಷದ ಸೋಂಕು ಪೀಡಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾ ಸೋಂಕಿಗೆ ತುತ್ತಾಗಿ ಮುಂಬೈನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 64 ವರ್ಷದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT